ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm