ಬ್ರೇಕಿಂಗ್ ನ್ಯೂಸ್
03-06-21 10:28 pm Satish, Bengaluru ಕರ್ನಾಟಕ
ಬೆಂಗಳೂರು, ಜೂನ್ 3: ಏಳು ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಕೆಎಸ್ಆರ್ಟಿಸಿ ಬ್ರ್ಯಾಂಡ್ ಹೆಸರು ಕೇರಳದ ಪಾಲಾಗಿದೆ. ಕೆಎಸ್ಆರ್ಟಿಸಿ ಹೆಸರನ್ನು ಕರ್ನಾಟಕ ಸರಕಾರ ತನ್ನ ಸಾರಿಗೆ ಪ್ರಾಧಿಕಾರಕ್ಕೆ ಬಳಕೆ ಮಾಡುವಂತಿಲ್ಲ ಎಂದು ಟ್ರೇಡ್ ಮಾರ್ಕ್ ಪ್ರಾಧಿಕಾರ ಆದೇಶ ಮಾಡಿದೆ.
ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ಎನ್ನುವ ವಿಸ್ತೃತ ರೂಪವನ್ನು ಕರ್ನಾಟಕ ಸರಕಾರ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಟ್ವಿಟ್ಟರ್ನಲ್ಲಿ ಕರ್ನಾಟಕ ಸಾರಿಗೆ ಸಮರ್ಥಿಸಿಕೊಂಡು ನೆಟ್ಟಿಗರು ಸರಣಿ ಟ್ವೀಟ್ಗಳನ್ನು ಮಾಡುತ್ತಿದ್ದಾರೆ.

KSRTC ಎನ್ನುವ ಹೆಸರನ್ನು ಕೇರಳದವರು ಗೆದ್ದುಕೊಳ್ಳಬಹುದು. ಆದರೆ ಕ.ರಾ.ರ.ಸಾ.ನಿ ಸೇವೆ ಮತ್ತು ಗುಣಮಟ್ಟವನ್ನು ಹಿಂದಿಕ್ಕುವುದು ದಕ್ಷಿಣ ಭಾರತದ ಯಾವ ರಾಜ್ಯದ ಸಾರಿಗೆ ನಿಗಮಕ್ಕೂ ಆಗಲಿಕ್ಕಿಲ್ಲ. ದಕ್ಷಿಣದ ನಾಲ್ಕು ರಾಜ್ಯಗಳ ಸಾರಿಗೆ ಬಳಸಿದ ಅನುಭವದ ಮೇಲೆ ಇದು ನನ್ನ ಅನಿಸಿಕೆ ಎಂದು ವಸಂತ್ ಶೆಟ್ಟಿ ಎಂಬವರು ಟ್ವೀಟ್ ಮಾಡಿದ್ದಾರೆ.
ಗಂಡಭೇರುಂಡ ಲೋಗೊ ಜೊತೆಗೆ ಕೇರಳ ಸರಕಾರ ಕೆಎಸ್ಸಾರ್ಟಿಸಿ ಹೆಸರನ್ನು ತನ್ನ ಸಾರಿಗೆ ಬಸ್ ಗಳಲ್ಲಿ ನಮೂದಿಸಿತ್ತು. ಆದರೆ, ಕರ್ನಾಟಕ ಸರಕಾರವೂ ಸಾರಿಗೆ ಪ್ರಾಧಿಕಾರಕ್ಕೆ ಅದೇ ಹೆಸರಿಟ್ಟು ಲೋಗೊ ಬದಲು ಮಾಡಿತ್ತು. ಈ ವಿಚಾರ ಜಟಾಪಟಿಗೆ ಕಾರಣವಾಗಿತ್ತಲ್ಲದೆ, ಕೇರಳ ಸರಕಾರ ಹೆಸರನ್ನು ತನ್ನದಾಗಿಸಿಕೊಳ್ಳಲು ಟ್ರೇಡ್ ಮಾರ್ಕ್ ಪ್ರಾಧಿಕಾರಕ್ಕೆ ದೂರು ನೀಡಿತ್ತು. ಕೆಎಸ್ಆರ್ಟಿಸಿ ಎಂಬ ಹೆಸರನ್ನು ಕೇರಳ 1962ರಲ್ಲೇ ನೋಂದಣಿ ಮಾಡಿಸಿದೆ. ಕರ್ನಾಟಕ 1972ರಲ್ಲಿ ನೋಂದಣಿ ಮಾಡಿಸಿದ್ದು ಎಂಬ ಅಂಶವನ್ನು ತೀರ್ಪು ನೀಡುವಾಗ ಪರಿಗಣಿಸಿದೆ.

ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಈ ಬಗ್ಗೆ ಅಧಿಕೃತ ಘೋಷಣೆ ಬಂದಿಲ್ಲ. ಆದೇಶ ಬಂದ ಮೇಲೆ ಕಾನೂನು ಹೋರಾಟದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
After a seven-year-long dispute with neighboring state Karnataka, the Kerala State Road Transport Corporation says it has got the legal rights to the trademarked-acronym KSRTC- with the logo of two elephants and the name Ana Vandi- associated with the state-run transport corporation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm