ಬ್ರೇಕಿಂಗ್ ನ್ಯೂಸ್
04-06-21 12:14 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 4: ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಮಣಿಪಾಲ್ ಗ್ರೂಪ್ ಸಮೂಹ ತನ್ನ ಉದ್ಯಮ ಜಾಲವನ್ನು ವಿಸ್ತರಿಸುತ್ತಲೇ ಇದ್ದು ಕೊರೊನಾ ಬಿಕ್ಕಟ್ಟಿನ ನಡುವೆಯೇ ಬೆಂಗಳೂರು ಮೂಲದ ವಿಕ್ರಮ್ ಆಸ್ಪತ್ರೆಯನ್ನು ಬರೋಬ್ಬರಿ 350 ಕೋಟಿ ರೂಪಾಯಿಗೆ ಖರೀದಿಸಿದೆ.
ಉದ್ಯಮಿ ರಂಜನ್ ಪೈ ಮಾಲೀಕತ್ವದ ಮಣಿಪಾಲ್ ಗ್ರೂಪ್ ಕಳೆದ ಏಪ್ರಿಲ್ನಲ್ಲಿ ಕೊಲಂಬಿಯಾ ಏಷ್ಯಾದ ಭಾರತೀಯ ವಿಭಾಗವನ್ನು 2,100 ಕೋಟಿ ರೂ.ಗೆ ಖರೀದಿಸಿ ಹುಬ್ಬೇರಿಸಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆಸ್ಪತ್ರೆಯನ್ನು ಖರೀದಿಸಿದ್ದು ಒಂದೇ ವರ್ಷದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಎರಡನೇ ಡೀಲ್ ನಡೆದಿದೆ. ಇದರೊಂದಿಗೆ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆ ಸಮೂಹವಾಗಿ ಮಣಿಪಾಲ್ ಗ್ರೂಪ್ ಸಮೂಹ ಹೊರಹೊಮ್ಮಿದೆ.
ಈ ಡೀಲ್ ಬಳಿಕ ವಿಕ್ರಮ್ ಆಸ್ಪತ್ರೆಯ ಹೆಸರು ಮಣಿಪಾಲ್ ಹಾಸ್ಪಿಟಲ್ ಎಂದು ಬದಲಾಗಲಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಒಂದರಲ್ಲೇ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ. (4 ಮಣಿಪಾಲ್ ಹಾಸ್ಪಿಟಲ್ಸ್, 5 ಕೊಲಂಬಿಯಾ ಏಷ್ಯಾ ಹಾಸ್ಪಿಟಲ್, ಒಂದು ವಿಕ್ರಮ್ ಆಸ್ಪತ್ರೆ).

ಇದೇ ವೇಳೆ, ಮಣಿಪಾಲ್ ಗ್ರೂಪ್ ಎರಡು ಕಡೆ ಗ್ರೀನ್ಫೀಲ್ಡ್ ಆಸ್ಪತ್ರೆಗಳನ್ನು ನಿರ್ಮಿಸುತ್ತಿದ್ದು, ಮುಂದಿನ 24 ತಿಂಗಳುಗಳಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ. ಇದರಿಂದ ನಮ್ಮ ನೆಟ್ವರ್ಕ್ 12 ಆಸ್ಪತ್ರೆಗಳಿಗೆ ವಿಸ್ತರಣೆಯಾಗಲಿದ್ದು, 2,300 ಬೆಡ್ ಲಭ್ಯವಾಗಲಿದೆ ಎಂದು ಎಂದು ಮಣಿಪಾಲ್ ಎಜ್ಯುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್ನ ಅಧ್ಯಕ್ಷ ರಂಜನ್ ಪೈ ತಿಳಿಸಿದ್ದಾರೆ.
ವಿಕ್ರಮ್ ಮತ್ತು ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ ಖರೀದಿಯ ನಂತರ ದೇಶದಲ್ಲಿ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 27ಕ್ಕೆ ಏರಿಕೆಯಾಗಲಿದೆ. 14 ನಗರಗಳಲ್ಲಿ ಮಣಿಪಾಲ್ ಆಸ್ಪತ್ರೆಗಳಿದ್ದು, 7,300 ಬೆಡ್ಗಳನ್ನು ಹೊಂದಿವೆ. 4,000 ವೈದ್ಯರು ಹಾಗೂ 11,000 ಸಿಬ್ಬಂದಿಗಳು ಆಸ್ಪತ್ರೆಗಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅತೀ ದೊಡ್ಡ ಆಸ್ಪತ್ರೆ ಸಮೂಹ ಅಪೋಲೊ ಬಳಿಯಲ್ಲಿ 70 ಆಸ್ಪತ್ರೆಗಳಿವೆ.
Manipal Hospitals, the second-largest hospital chain in India, entered into a definitive agreement with private equity firm Multiples to acquire a 100% stake in Bengaluru-based multi-specialty hospital Vikram Hospital for consideration of ₹350 crores.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm