ಬ್ರೇಕಿಂಗ್ ನ್ಯೂಸ್
04-06-21 12:14 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 4: ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಮಣಿಪಾಲ್ ಗ್ರೂಪ್ ಸಮೂಹ ತನ್ನ ಉದ್ಯಮ ಜಾಲವನ್ನು ವಿಸ್ತರಿಸುತ್ತಲೇ ಇದ್ದು ಕೊರೊನಾ ಬಿಕ್ಕಟ್ಟಿನ ನಡುವೆಯೇ ಬೆಂಗಳೂರು ಮೂಲದ ವಿಕ್ರಮ್ ಆಸ್ಪತ್ರೆಯನ್ನು ಬರೋಬ್ಬರಿ 350 ಕೋಟಿ ರೂಪಾಯಿಗೆ ಖರೀದಿಸಿದೆ.
ಉದ್ಯಮಿ ರಂಜನ್ ಪೈ ಮಾಲೀಕತ್ವದ ಮಣಿಪಾಲ್ ಗ್ರೂಪ್ ಕಳೆದ ಏಪ್ರಿಲ್ನಲ್ಲಿ ಕೊಲಂಬಿಯಾ ಏಷ್ಯಾದ ಭಾರತೀಯ ವಿಭಾಗವನ್ನು 2,100 ಕೋಟಿ ರೂ.ಗೆ ಖರೀದಿಸಿ ಹುಬ್ಬೇರಿಸಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆಸ್ಪತ್ರೆಯನ್ನು ಖರೀದಿಸಿದ್ದು ಒಂದೇ ವರ್ಷದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಎರಡನೇ ಡೀಲ್ ನಡೆದಿದೆ. ಇದರೊಂದಿಗೆ ಅಪೊಲೊ ನಂತರ ದೇಶದ ಎರಡನೇ ಅತಿ ದೊಡ್ಡ ಆಸ್ಪತ್ರೆ ಸಮೂಹವಾಗಿ ಮಣಿಪಾಲ್ ಗ್ರೂಪ್ ಸಮೂಹ ಹೊರಹೊಮ್ಮಿದೆ.
ಈ ಡೀಲ್ ಬಳಿಕ ವಿಕ್ರಮ್ ಆಸ್ಪತ್ರೆಯ ಹೆಸರು ಮಣಿಪಾಲ್ ಹಾಸ್ಪಿಟಲ್ ಎಂದು ಬದಲಾಗಲಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಒಂದರಲ್ಲೇ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ. (4 ಮಣಿಪಾಲ್ ಹಾಸ್ಪಿಟಲ್ಸ್, 5 ಕೊಲಂಬಿಯಾ ಏಷ್ಯಾ ಹಾಸ್ಪಿಟಲ್, ಒಂದು ವಿಕ್ರಮ್ ಆಸ್ಪತ್ರೆ).

ಇದೇ ವೇಳೆ, ಮಣಿಪಾಲ್ ಗ್ರೂಪ್ ಎರಡು ಕಡೆ ಗ್ರೀನ್ಫೀಲ್ಡ್ ಆಸ್ಪತ್ರೆಗಳನ್ನು ನಿರ್ಮಿಸುತ್ತಿದ್ದು, ಮುಂದಿನ 24 ತಿಂಗಳುಗಳಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ. ಇದರಿಂದ ನಮ್ಮ ನೆಟ್ವರ್ಕ್ 12 ಆಸ್ಪತ್ರೆಗಳಿಗೆ ವಿಸ್ತರಣೆಯಾಗಲಿದ್ದು, 2,300 ಬೆಡ್ ಲಭ್ಯವಾಗಲಿದೆ ಎಂದು ಎಂದು ಮಣಿಪಾಲ್ ಎಜ್ಯುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್ನ ಅಧ್ಯಕ್ಷ ರಂಜನ್ ಪೈ ತಿಳಿಸಿದ್ದಾರೆ.
ವಿಕ್ರಮ್ ಮತ್ತು ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ ಖರೀದಿಯ ನಂತರ ದೇಶದಲ್ಲಿ ಮಣಿಪಾಲ್ ಗ್ರೂಪ್ನ ಆಸ್ಪತ್ರೆಗಳ ಸಂಖ್ಯೆ 27ಕ್ಕೆ ಏರಿಕೆಯಾಗಲಿದೆ. 14 ನಗರಗಳಲ್ಲಿ ಮಣಿಪಾಲ್ ಆಸ್ಪತ್ರೆಗಳಿದ್ದು, 7,300 ಬೆಡ್ಗಳನ್ನು ಹೊಂದಿವೆ. 4,000 ವೈದ್ಯರು ಹಾಗೂ 11,000 ಸಿಬ್ಬಂದಿಗಳು ಆಸ್ಪತ್ರೆಗಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅತೀ ದೊಡ್ಡ ಆಸ್ಪತ್ರೆ ಸಮೂಹ ಅಪೋಲೊ ಬಳಿಯಲ್ಲಿ 70 ಆಸ್ಪತ್ರೆಗಳಿವೆ.
Manipal Hospitals, the second-largest hospital chain in India, entered into a definitive agreement with private equity firm Multiples to acquire a 100% stake in Bengaluru-based multi-specialty hospital Vikram Hospital for consideration of ₹350 crores.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm