ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.

ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm