ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.
ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm