ಬ್ರೇಕಿಂಗ್ ನ್ಯೂಸ್
05-06-21 04:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5: ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ತಿಳಿಸಿದ್ದರು.
ಪೂರ್ವಭಾವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಆಗ ಪಡೆದ ಅಂಕಗಳ ಆಧಾರದ ಮೇಲೆ ಈಗ ಮಾನದಂಡ ನಿಗದಿ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅದೇ ರೀತಿ ಎಸ್ಎಸ್ಎಲ್ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ನ್ಯಾಯಯುತವಾಗಿರಲು ಈ ನಡೆಯನ್ನು ಅನುಸರಿಸುತ್ತಿದ್ದೇವೆ. ಈ ಕುರಿತು ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದರು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅಂಕಿ-ಅಂಶ ಪಡೆಯಬೇಕು ಎಂದು ಸೂಚಿಸಲಾಗಿದ್ದು, ಜೊತೆಗೆ ಪ್ರಥಮ ಪಿಯುಸಿ ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಲೂ ಆದೇಶಿಸಲಾಗಿದೆ. ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ವೃತ್ತಿಪರ ಕೋರ್ಸ್ಗೆ ಸಿಇಟಿ ಅಂಕ ಮಾತ್ರ ಪರಿಗಣಿಸಿ;
ಇನ್ನು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಹಿನ್ನೆಲೆ ಈ ಮನವಿ ಮಾಡಿಕೊಂಡಿರುವ ಅವರು, ವೃತ್ತಿಪರ ಕೋರ್ಸ್ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆ ಬೇಡ ಎಂದಿದ್ದಾರೆ.
ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಶ್ರೇಣಿಗೆ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಿ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಅಶ್ವಥ್ ನಾರಾಯಣ್ ಅವರಿಗೆ ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Primary and Secondary Education Minister S. Suresh Kumar has directed the Department of Pre-University Education to also consider Class 10 (SSLC) marks when grading second pre-university (PU) students. While announcing the cancellation of II PU exams on Friday, the Minister had said that the previous year’s marks would be taken into consideration.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm