ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm