ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm