ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm