ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm