ಬ್ರೇಕಿಂಗ್ ನ್ಯೂಸ್
10-06-21 05:01 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 10 : ಜೆಡಿಎಸ್ ಮುಖಂಡ, ಮಾಜಿ ಸಚಿವ ಸಾರಾ ಮಹೇಶ್ ಭೂ ಹಗರಣ ಹೊರಬೀಳುತ್ತಿದ್ದಂತೆ ಮೈಸೂರಿನ ಮತ್ತೊಬ್ಬ ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ತೊಡೆ ತಟ್ಟಿದ್ದಾರೆ. ಅಲ್ಲದೆ, ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಎಚ್.ವಿಶ್ವನಾಥ್, ಡಿಸಿ ಯಾವುದೇ ಚಪರಾಸಿ ವ್ಯಕ್ತಿ ಅಲ್ಲ. ಒಬ್ಬ ಡಿಸಿಯ ಬಗ್ಗೆ ನಾವು ಯಾವ ರೀತಿ ಮಾತನಾಡುತ್ತಿದ್ದೇವೆ. ಕೊರೊನಾ ಓಡಿಸಿ ಅಂತ ಸಿಎಂ, ಪಿಎಂ ಕರೆ ನೀಡಿದ್ದರೆ, ಇವರೆಲ್ಲಾ ಸೇರಿಕೊಂಡು ಇಲ್ಲಿನ ಐಎಎಸ್ ಅಧಿಕಾರಿಗಳನ್ನೇ ಓಡಿಸುತ್ತಿದ್ದಾರೆ. ಎಲ್ರೂ ಸೇರಿ ಶಿಲ್ಪಾನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್ ಮಾಡಿದ್ದಾರೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇವರು ಹಾಸನದಿಂದ ಇಲ್ಲಿ ಬಂದು ಪ್ರೆಸ್ಮೀಟ್ ಮಾಡುತ್ತಾರಲ್ಲಾ.. ಎಂದು ಪರೋಕ್ಷವಾಗಿ ಸಾರಾ ಮಹೇಶ್ ಬಗ್ಗೆ ತಿವಿದ ಹಳ್ಳಿಹಕ್ಕಿ , ಏನಾಗಿದೆ ಮೈಸೂರಿಗೆ ? ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ನಿರ್ಮಾಣ ಆಗಿದೆ ಅಂತೀರಲ್ರೀ.. ಇದಕ್ಕಾಗಿ ಒಂದು ಗುಂಟೆ ಅಲ್ಲ, ಸಾವಿರಾರು ಎಕರೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಲಿ, ಮೈಸೂರು ಸುತ್ತಮುತ್ತ ಏನೇನು ಒತ್ತುವರಿ ಆಗಿದೆ. ಎಲ್ಲದರ ಬಗ್ಗೆನೂ ತನಿಖೆಯಾಗಲಿ. ಚಾಮುಂಡಿಬೆಟ್ಟದ ಸುತ್ತಲೂ ಸಾಕಷ್ಟು ಭೂ ಒತ್ತುವರಿ ಆಗಿದೆ. ಇದೆಲ್ಲದರ ತನಿಖೆಗೆ ರೋಹಿಣಿ ಸಿಂಧೂರಿಯನ್ನೇ ಆರು ತಿಂಗಳಿಗೆ ವಿಶೇಷಾಧಿಕಾರಿಯಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಎಲ್ಲಾ ಜನಪ್ರತಿನಿಧಿಗಳು ಒಟ್ಟಾಗಿ ಸೇರಿ ಕರೊನಾ ಓಡಿಸುವ ಬದಲು ಅಧಿಕಾರಿಯನ್ನೇ ಓಡಿಸಿದರು.ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ಇಬ್ಬರೂ ಒಳ್ಳೆಯ ಅಧಿಕಾರಿಗಳು. ಇಬ್ಬರು ಐಎಎಸ್ ಅಧಿಕಾರಿಗಳನ್ನು ಹೊರ ಹಾಕಿದ್ದು ರಾಜಕಾರಣಿಗಳ ಸ್ವಾರ್ಥ ಎಂದು ಕಿಡಿಕಾರಿದ ಎಚ್ ವಿಶ್ವನಾಥ್, ಈಗ ರಿಯಲ್ ಎಸ್ಟೇಟ್ ಅನ್ನೋದು ದೊಡ್ಡ ಇಂಡಸ್ಟ್ರಿಯಾಗಿ ಬದಲಾಗಿದೆ. ಈ ಪೈಕಿ ಸಾರಾ ಮಹೇಶ್ ಯಾವ ಇಂಡಸ್ಟ್ರಿಲಿಯಸ್ಟ್ ? ಇಲ್ಲಿನ ಮುಡಾ ಅಧ್ಯಕ್ಷ ಯಾವ ಇಂಡಸ್ಟ್ರಿ ಮಾಡಿದ್ದಾರೆ ? ಎಷ್ಟು ಜನಕ್ಕೆ ಉದ್ಯೋಗ ನೀಡಿದ್ದಾರೆ ?

ನನ್ನ ಅನಿಸಿಕೆ ಪ್ರಕಾರ, ಶಿಲ್ಪಾನಾಗ್ ಇಲ್ಲಿ ಬಲಿಪಶು ಆಗಿದ್ದಾರೆ. ಆದರೆ, ಇವರ ಕಮಿಷನ್ ಎಷ್ಟು ಅನ್ನೋದನ್ನು ಕೇಳಬಯಸುತ್ತೇನೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆಯೇ ನಿಮ್ಮ ಕಮಿಷನ್ನಾ ಎಂದು ಪ್ರಶ್ನೆ ಮಾಡಿದ್ದಾರೆ.
ಸಾ.ರಾ.ಮಹೇಶ್ ಮತ್ತು ರಾಜೀವ್ ಇಬ್ಬರೂ ಬ್ಯುಸಿನೆಸ್ ಪಾಲುದಾರರು ಎಂಬುದು ನಿಜ. ಆದರೆ, ಇವರಿಬ್ಬರು ಯಾವ ಇಂಡಸ್ಟ್ರೀ ಮಾಡಿಕೊಂಡಿದ್ದೀರಾ.. ಎಷ್ಟು ಜನರಿಗೆ ಕೆಲಸ ಕೊಟ್ಟಿದ್ದೀರಾ.. ರಿಯಲ್ ಎಸ್ಟೇಟೇ ನಿಮಗೆ ಒಂದು ಇಂಡಸ್ಟ್ರಿಯೇ ? ಇವರಿಬ್ಬರು ಹಿಂದೆ ಹೇಗಿದ್ರು ಈಗ ಹೇಗಿದ್ದಾರೆ ಎಂದು ನೋಡಿಕೊಳ್ಳಿ ಎಂದು ಹಳೆಯದನ್ನು ಕೆದಕಿ ಟಾಂಗ್ ಕೊಟ್ಟರು.

ಜಿಲ್ಲಾಧಿಕಾರಿಯಾಗಿ ಭೂ ಒತ್ತುವರಿಯ ತನಿಖೆಗೆ ಮುಂದಾದರೆ, ನಿಮಗೆ ಯಾಕೆ ಹೆದರಿಕೆ ಆಗಬೇಕು. ಸಾರಾ ಮಹೇಶ್ ಪ್ರತಿಭಟನೆ ಮಾಡುವ ಬದಲು ತಮ್ಮ ಸಾರಾ ಕಲ್ಯಾಣ ಮಂಟಪದ ಬಗ್ಗೆ ದಾಖಲೆ ಕೊಡಲಿ ಎಂದು ಹೇಳಿದರು. ಸುದ್ದಿಗೋಷ್ಟಿಗೂ ಮುನ್ನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾದ ವಿಶ್ವನಾಥ್, ಇಡೀ ಪ್ರಕರಣದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.
BJP Senior Leader H Vishwanath appeals government to appoint Rohini Sindhi as special officer to investigate land encroachment in mysuru
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm