ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm