ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm