ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am