ಬ್ರೇಕಿಂಗ್ ನ್ಯೂಸ್
11-06-21 07:19 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 11: ದಲಿತ ಕವಿಯೆಂದೇ ಹೆಸರಾಗಿದ್ದ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಡಾ.ಜಿ. ಸಿದ್ದಲಿಂಗಯ್ಯ (67) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರನ್ನು ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆ ಎದುರಿಸಿದ್ದ ಅವರನ್ನು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೆಡ್ ಸಿಗದೆ ಪರದಾಡಿದ್ದ ಅವರಿಗೆ ಬಳಿಕ ಡಿಸಿಎಂ ಅಶ್ವತ್ಥ ನಾರಾಯಣ ಮೂಲಕ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಲಾಗಿತ್ತು. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿದ್ದಲಿಂಗಯ್ಯ, ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕವನ, ಸಾಹಿತ್ಯಗಳನ್ನು ರಚಿಸಿದ್ದರು. ಅಧ್ಯಾಪಕರಾಗಿದ್ದ ಅವರು ಅಂಬೇಡ್ಕರ್, ಲೋಹಿಯಾರಿಂದ ಪ್ರೇರಿತಗೊಂಡು ಸಾಮಾಜಿಕ ಹೋರಾಟ ಮತ್ತು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು. ಸಿದ್ದರಾಮಯ್ಯ ಸರಕಾರ ಇದ್ದಾಗ ಸಿದ್ದಲಿಂಗಯ್ಯ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಗಮನ ಸೆಳೆಯುವ ಕೆಲಸ ಮಾಡಿದ್ದರು.
1954ರಲ್ಲಿ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ ಜನಿಸಿದ್ದ ಸಿದ್ದಲಿಂಗಯ್ಯ ಕಷ್ಟದ ದಿನಗಳನ್ನು ಎದುರಿಸಿ ಜೀವನದಲ್ಲಿ ಮೇಲೆ ಬಂದಿದ್ದರು. ತನ್ನ ಸಾಹಿತ್ಯ, ಹೋರಾಟದಲ್ಲಿ ಸದಾ ಸಾಮಾಜಿಕ ಸಮಾನತೆ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರ ಜಾಗೃತಿಗಾಗಿ ಜೀವ ತೇದಿದ್ದರು. ಕವನ ಸಂಕಲನಗಳ ಮೂಲಕ ಜನರಲ್ಲಿ ಜಾಗೃತಿಯ ಕಿಡಿ ಹಚ್ಚಿಸಿದ್ದವರು ಸಿದ್ದಲಿಂಗಯ್ಯ. ಹೊಲೆಮಾದಿಗರ ಹಾಡು, ಮೆರವಣಿಗೆ ಮುಂತಾದ ಕವನ ಸಂಕಲನಗಳನ್ನು ಹೊರತಂದಿದ್ದ ಸಿದ್ದಲಿಂಗಯ್ಯ, ಊರುಕೇರಿ ಎಂಬ ಆತ್ಮಕಥನದಲ್ಲಿ ತನ್ನದೇ ಬದುಕಿನ ಚಿತ್ರಣವನ್ನು ತೆರೆದಿಟ್ಟಿದ್ದರು.
Noted Dalit poet Dr. Siddalingaiah, 67, passed away on Friday evening, losing his fight against COVID-19. He had been admitted to the Manipal Hospitals for over a month and was on ventilator support for several weeks. He is survived by his wife, who also was afflicted by the infection but recovered, a son and a daughter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm