ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.

'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm