ಬ್ರೇಕಿಂಗ್ ನ್ಯೂಸ್
12-06-21 02:27 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 12: ಪ್ರಸಕ್ತ ವರ್ಷದ (2021–22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್'ಲೈನ್ ಮತ್ತು ಆಫ್'ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ.
ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು ಆಪ್ ಲೋಡ್ ಮಾಡಲಾಗಿದೆ. ಈ ಆ್ಯಪ್ ನಲ್ಲಿ ಮೌಲ್ಯವರ್ಧಿತ ಪಠ್ಯಪುಸ್ತಕಗಳೂ ದೊರೆಯಲಿವೆ. ಅವುಗಳೆಲ್ಲವನ್ನೂ ಡೌನ್ ಲೋಡ್ ಮಾಡಿಕೊಂಡು ಪಾಠ ಅಭ್ಯಾಸ ಮಾಡಬಹುದಾಗಿದೆ.
ಜೊತೆಗೆ ಶಿಕ್ಷಕರು ಪಠ್ಯ ಬೋಧನೆಯ ಪುಟ್ಟ ವಿಡಿಯೋ ಮಾಡಿ ಮಕ್ಕಳ ಪೋಷಕರಿಗೆ ಹಂಚಿಕೊಳ್ಳಬಹುದು. ತರಗತಿವಾರು ಮಕ್ಕಳ ಪೋಷಕರ ವಾಟ್ಸ್ ಆ್ಯಪ್ ಗುಂಪುಗಳನ್ನು ಮಾಡಿ ಅವರನ್ನು ನಿಗದಿತವಾಗಿ ಸಂಪರ್ಕಿಸಿ ಮಕ್ಕಳ ಕಲಿಕೆಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ದೂರದರ್ಶನ ರೇಡಿಯೋ ಪಾಠ ಬೋಧನಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಪರ್ಕಿಸಿ ಮೊಬೈಲ್ ಫೋನ್, ಇಂಟರ್ನೆಟ್, ರೇಡಿಯೋ ದೂರದರ್ಶನ ಸೇರಿದಂತೆ ಮತ್ತಿತರ ತಾಂತ್ರಿಕ ಸೌಲಭ್ಯ ಮಾಹಿತಿ ಪಡೆದು, ಅವುಗಳ ಮೂಲಕ ಹೇಗೆ ಶಿಕ್ಷಣ ಪಡೆಯಬೇಕು ಎಂಬ ಗ್ಗೆ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಿಗೆ ಇಲಾಖೆ ಸೂಚಿಸಿದೆ.
ಯಾವುದೇ ತಾಂತ್ರಿಕ ಸೌಲಭ್ಯವಿಲ್ಲದ ವಿದ್ಯಾರ್ಥಿಗಳ ಮನೆಯ ಸಮೀಪದ ಸಹೃದಯಿ ವ್ಯಕ್ತಿ ಗುರ್ತಿರಿ ಅವರ ಬಳಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಅನುವಾಗುವಂತೆ ಶಿಕ್ಷಕರು ಮನವೊಲಿಸುವಂತೆಯೂ ಇಲಾಖೆ ಶಿಕ್ಷಕರಿಸೆ ಸೂಚಿಸಿದೆ.
ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಶಾಲೆಗೆ ಭೇಟಿ ನೀಡಲು ಅವಕಾಶ ನೀಡಲಾಗಿದ್ದು, ಈ ವೇಳೆ ಪ್ರಾಕ್ಟೀಸ್ ಶೀಟ್ ಗಳನ್ನು ನೀಡುವ ಶಿಕ್ಷಕರು, ಅವುಗಳನ್ನು ಯಾವ ರೀತಿ ಬರೆಯಬೇಕೆಂಬುದನ್ನು ಮಕ್ಕಳಿಗೆ ವಿವರಿಸಬೇಕು. ಮಕ್ಕಳು ಅಭ್ಯಾಸ ಮಾಡಿದ ಈ ಹಾಳೆಗಳು ಮುಂದಿನ ದಿನಗಳಲ್ಲಿ ಮೌಲ್ಯಮಾಪನಕ್ಕೆ ಬಳಕೆಯಾಗಲಿದೆ. ಪ್ರತೀ ಶಿಕ್ಷಕರು 10-15 ಮಕ್ಕಳಿಗೆ ಬೋಧನೆ ಮಾಡುವ ಜವಾಬ್ದಾರಿ ತೆರೆದುಕೊಳ್ಳಬೇಕು. ಮನೆಗಳಲ್ಲಿ ಟಿವಿ ಸೌಲಭ್ಯ ಇರುವ ಮಕ್ಕಳೂ ಕೂಡ ಈ ಅಭ್ಯಾಸವನ್ನು ಮಾಡಬೇಕು.
ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸಲು ಹಿಂದಿನ ವರ್ಷದ ಪಠ್ಯ ಕೂಡ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 30 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಸೇತುಬಂಧ ಕಾರ್ಯಕ್ರಮದ ಅಂತಿಮ ದಿನಗಳಲ್ಲಿ ಈ ಸಂಬಂಧ ಮಕ್ಕಳಿಗೆ ಆನ್'ಲೈನ್ ಹಾಗೂ ಆಫ್'ಲೈನ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಈ ಹಿಂದಿನ ವರ್ಷದಂತೆಯೇ ವಿದ್ಯಾರ್ಥಿಗಳೂ ಈ ಬಾರಿಯು ಸಿದ್ಧತೆಗಳನ್ನು ನಡೆಸಬೇಕು.
ಶಾಲೆಯ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ವೇಳಾಪಟ್ಟಿಯನ್ನು ಸಿದ್ಧಪಡಿಸಿ ವಾರಕ್ಕೊಮ್ಮೆ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಭೇಟಿ ನೀಡುವಂತೆ ಮಾಡಿ, ವಿದ್ಯಾರ್ಥಿಯ ಕಾರ್ಯಕ್ಷಮತೆ ಕುರಿತು ಮಾತುಕತೆ ನಡೆಸಬೇಕು. ಪ್ರತಿ ವಿದ್ಯಾರ್ಥಿಯ ವಿಷಯವಾರು ಕೃತಿ ಸಂಪುಟ ನಿರ್ವಹಣೆ ಮಾಡಿ ಮೌಲ್ಯಮಾಪನ ಮಾಡಬೇಕು. ಇದರ ವಿವರವನ್ನು ಕಡ್ಡಾಯವಾಗಿ ವಿದ್ಯಾರ್ಥಿ ಸಾಮರ್ಥ್ಯ ಟ್ರಾಕಿಂಗ್ ವ್ಯವಸ್ಥೆ ತಂತ್ರಾಂಶದಲ್ಲಿ ಅಳವಡಿಸಬೇಕು ಎಂದು ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
The Primary and Secondary Education Department has issued detailed guidelines with various alternatives for the admission process, online and offline classes, and preparations for the 2021-22 academic year, which begins from July 1.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm