ಬ್ರೇಕಿಂಗ್ ನ್ಯೂಸ್
15-06-21 12:20 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 15 : ಭೂ ಒತ್ತುವರಿ ಆರೋಪಕ್ಕೀಡಾಗಿದ್ದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಒಡೆತನದ ಸಾರಾ ಕನ್ವೆನ್ಷನ್ ಹಾಲ್ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಸಾರಾ ಮಹೇಶ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಸಾರಾ ಪೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದ ಶಾಸಕರು ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ನಾಲ್ವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು. ಸಮಿತಿ ಸಾರಾ ಕನ್ವೆಂಷನ್ ಹಾಲ್ ಅನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿಲ್ಲ ಎಂದು ವರದಿ ನೀಡುವ ಮೂಲಕ ಕ್ಲೀನ್ ಚಿಟ್ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಸಮೀಕ್ಷೆ ನಡೆಸಿದ ಸ್ಥಳದ ಮ್ಯಾಪ್ ತೋರಿಸಿ ಸ್ಪಷ್ಟನೆ ನೀಡಿದರಲ್ಲದೆ ಹಳ್ಳದ ಮೇಲೆ ಚೌಲ್ಟ್ರಿ ನಿರ್ಮಿತವಾಗಿಲ್ಲ. ಹಳ್ಳದ ಜಾಗವನ್ನು ಒತ್ತುವರಿ ಮಾಡಿಲ್ಲ. ಕೆಲವು ಕಡೆ 70 ಮೀಟರ್ ಅಂತರ ಇರುವುದನ್ನು ತೋರಿಸಲಾಗಿದೆ. ಎಲ್ಲಿಯೂ ಒತ್ತುವರಿ ಆಗಿಲ್ಲ ಎಂದರು.
30 ವರ್ಷಗಳ ಹಿಂದೆ ಎಕರೆಗೆ 90 ಸಾವಿರ ರೂಪಾಯಿಗೆ ನಾಲ್ಕು ಎಕರೆ ಭೂಮಿ ಖರೀದಿ ಮಾಡಿದ್ದೆ. ಎರಡು ಎಕರೆ ಅಕ್ರಮ ಅಂತಾ ಹೇಳಿದ್ದರು. ನಾನು ಖರೀದಿ ಮಾಡಿದ್ದೇ 4 ಎಕರೆ. ಈ ಬಗ್ಗೆ ಅವರಿಗೇ ಸರಿಯಾದ ಮಾಹಿತಿ ಇಲ್ಲ. ಲಿಂಗಾಂಬುದಿಪಾಳ್ಯ ಬಫರ್ಝೋನ್ ವ್ಯಾಪ್ತಿ ಸಂಬಂಧ ಪತ್ರ ಬರೆದಿದ್ದಾರೆ. 2018ರ ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಕಾರ 30 ಮೀಟರ್ ಇದೆ. ಆದರೆ, ರೋಹಿಣಿ ಸಿಂಧೂರಿ 2016ರ ಕಾಯ್ದೆ ಪ್ರಕಾರ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಟೀಕಿಸಿದರು.
ಕರ್ತವ್ಯ ಲೋಪ ಆರೋಪದ ಮೇರೆಗೆ ರೋಹಿಣಿ ಸಿಂಧೂರಿಯ ವರ್ಗಾವಣೆ ಮಾಡಿರುವುದು. ಆದರೆ ಅದನ್ನು ಮುಚ್ಚಿಡುವ ಸಲುವಾಗಿ ಭೂಮಾಫಿಯಾ ಆರೋಪ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
The committee constituted to investigate the allegations against Sara Choultry submitted a report on Monday stating that the said building had not been constructed on the Rajakaluve.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm