ಬ್ರೇಕಿಂಗ್ ನ್ಯೂಸ್
15-06-21 10:06 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 15: ಅಯೋಧ್ಯೆಯ ರಾಮ ಮಂದಿರದ ಕಾರ್ಯದಲ್ಲಿ ಭ್ರಷ್ಟಾಚಾರ ಆಗಿದ್ದರೆ, ಅವರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಅದರ ಬಗ್ಗೆ ಸುಪ್ರೀಂ ಕೋರ್ಟ್ ನಿಗಾದಡಿ ತನಿಖೆ ನಡೆಯಬೇಕು. ಯಾಕಂದ್ರೆ, ರಾಮ ಮಂದಿರ ದೇಶದ ಜನರ ನಂಬಿಕೆಯ ವಿಚಾರ. ದೇಶಾದ್ಯಂತ ಗ್ರಾಮ ಗ್ರಾಮಗಳಲ್ಲಿ ಜನರಿಂದ ಸಂಗ್ರಹಿಸಿರುವ ಹಣವನ್ನು ದುರುಪಯೋಗ ಮಾಡಿರುವುದು ರಾಮನ ಮೇಲಿನ ನಂಬಿಕೆಯನ್ನೇ ಘಾಸಿಗೊಳಿಸಿದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಡಿಕೆಶಿ, ಹಳ್ಳಿ ಹಳ್ಳಿಗಳ ಜನರು ನೀಡಿರುವ ದೇಣಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಭೂ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಇದು ದೇಶದ ಜನರ ಭಾವನೆಯ ಮೇಲೆ ಮಾಡಿರುವ ಅನ್ಯಾಯ. ಯಾಕಂದ್ರೆ, ಜನರು ತಮ್ಮ ದುಡಿದ ಹಣವನ್ನು ರಾಮನ ಮೇಲಿನ ಭಕ್ತಿಯಿಂದ ಕೊಟ್ಟಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಬಂದಿರುವುದು ಇಡೀ ದೇಶಕ್ಕೆ ಅವಮಾನ. ದೇಶದ ಜನತೆಗೆ ಮಾಡಿದ ಅವಮಾನ. ನಂಬಿಕೆಯ ಮೇಲೆ ಎಸಗಿದ ಘೋರ ಪ್ರಮಾದ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.
ದೇಶಾದ್ಯಂತ ಜನರು ರಾಮನಿಗಾಗಿ ತಮ್ಮಿಂದಾದ ಹಣ ಮತ್ತು ಮಂದಿರ ಕಟ್ಟಲು ಕಲ್ಲನ್ನು ದಾನ ನೀಡಿದ್ದಾರೆ. ಈಗ ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಮೋದಿಯೇ ಇರಲಿ, ಯೋಗಿಯೇ ಇರಲಿ. ತಪ್ಪಿತಸ್ಥರಾದರೆ ಶಿಕ್ಷೆ ಎದುರಿಸಬೇಕು. ಯಾಕಂದ್ರೆ, ರಾಮನ ಮೇಲಿನ ದೇಶದ ಜನರ ನಂಬಿಕೆ ಮತ್ತು ಭಾವನೆಯನ್ನು ಇವರು ಘಾಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ದರ ನೂರು ರೂ. ಗಡಿ ದಾಟಿದೆ. ಇದರಲ್ಲಿ 65 ರೂ. ತೆರಿಗೆಯಾದರೆ, ಪೆಟ್ರೋಲಿನ ಮೂಲ ಬೆಲೆ ಕೇವಲ 35 ರೂಪಾಯಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಮೇಲೆ ಹೊರೆ ಹೊರಿಸಿ, ಇವರು ದುಡ್ಡು ಮಾಡುತ್ತಿದ್ದಾರೆ. ದೇಶಾದ್ಯಂತ 100 ನಾಟೌಟ್ ಪ್ರತಿಭಟನೆಯನ್ನು ಕಾಂಗ್ರೆಸ್ ಮಾಡುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಡಿಕೆಶಿ ಹೇಳಿದರು.
Karnataka Pradesh Congress Committee president, D K Shivakumar has demanded that the guilty in the alleged Ram Mandir land scam in Ayodhya must be punished.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm