ಬ್ರೇಕಿಂಗ್ ನ್ಯೂಸ್
15-06-21 10:06 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 15: ಅಯೋಧ್ಯೆಯ ರಾಮ ಮಂದಿರದ ಕಾರ್ಯದಲ್ಲಿ ಭ್ರಷ್ಟಾಚಾರ ಆಗಿದ್ದರೆ, ಅವರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಅದರ ಬಗ್ಗೆ ಸುಪ್ರೀಂ ಕೋರ್ಟ್ ನಿಗಾದಡಿ ತನಿಖೆ ನಡೆಯಬೇಕು. ಯಾಕಂದ್ರೆ, ರಾಮ ಮಂದಿರ ದೇಶದ ಜನರ ನಂಬಿಕೆಯ ವಿಚಾರ. ದೇಶಾದ್ಯಂತ ಗ್ರಾಮ ಗ್ರಾಮಗಳಲ್ಲಿ ಜನರಿಂದ ಸಂಗ್ರಹಿಸಿರುವ ಹಣವನ್ನು ದುರುಪಯೋಗ ಮಾಡಿರುವುದು ರಾಮನ ಮೇಲಿನ ನಂಬಿಕೆಯನ್ನೇ ಘಾಸಿಗೊಳಿಸಿದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಡಿಕೆಶಿ, ಹಳ್ಳಿ ಹಳ್ಳಿಗಳ ಜನರು ನೀಡಿರುವ ದೇಣಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಭೂ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಇದು ದೇಶದ ಜನರ ಭಾವನೆಯ ಮೇಲೆ ಮಾಡಿರುವ ಅನ್ಯಾಯ. ಯಾಕಂದ್ರೆ, ಜನರು ತಮ್ಮ ದುಡಿದ ಹಣವನ್ನು ರಾಮನ ಮೇಲಿನ ಭಕ್ತಿಯಿಂದ ಕೊಟ್ಟಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಬಂದಿರುವುದು ಇಡೀ ದೇಶಕ್ಕೆ ಅವಮಾನ. ದೇಶದ ಜನತೆಗೆ ಮಾಡಿದ ಅವಮಾನ. ನಂಬಿಕೆಯ ಮೇಲೆ ಎಸಗಿದ ಘೋರ ಪ್ರಮಾದ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.
ದೇಶಾದ್ಯಂತ ಜನರು ರಾಮನಿಗಾಗಿ ತಮ್ಮಿಂದಾದ ಹಣ ಮತ್ತು ಮಂದಿರ ಕಟ್ಟಲು ಕಲ್ಲನ್ನು ದಾನ ನೀಡಿದ್ದಾರೆ. ಈಗ ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಮೋದಿಯೇ ಇರಲಿ, ಯೋಗಿಯೇ ಇರಲಿ. ತಪ್ಪಿತಸ್ಥರಾದರೆ ಶಿಕ್ಷೆ ಎದುರಿಸಬೇಕು. ಯಾಕಂದ್ರೆ, ರಾಮನ ಮೇಲಿನ ದೇಶದ ಜನರ ನಂಬಿಕೆ ಮತ್ತು ಭಾವನೆಯನ್ನು ಇವರು ಘಾಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ದರ ನೂರು ರೂ. ಗಡಿ ದಾಟಿದೆ. ಇದರಲ್ಲಿ 65 ರೂ. ತೆರಿಗೆಯಾದರೆ, ಪೆಟ್ರೋಲಿನ ಮೂಲ ಬೆಲೆ ಕೇವಲ 35 ರೂಪಾಯಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಮೇಲೆ ಹೊರೆ ಹೊರಿಸಿ, ಇವರು ದುಡ್ಡು ಮಾಡುತ್ತಿದ್ದಾರೆ. ದೇಶಾದ್ಯಂತ 100 ನಾಟೌಟ್ ಪ್ರತಿಭಟನೆಯನ್ನು ಕಾಂಗ್ರೆಸ್ ಮಾಡುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಡಿಕೆಶಿ ಹೇಳಿದರು.
Karnataka Pradesh Congress Committee president, D K Shivakumar has demanded that the guilty in the alleged Ram Mandir land scam in Ayodhya must be punished.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm