ಬ್ರೇಕಿಂಗ್ ನ್ಯೂಸ್
16-06-21 05:52 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಲು ಕೆಲವು ಶಾಸಕರು ದೆಹಲಿಗೆ ಹೋಗಿದ್ದು ನಿಜ. ಪಕ್ಷದಲ್ಲಿ ಈ ಬಗ್ಗೆ ಗೊಂದಲ ಆಗಿರುವುದೂ ನಿಜ ಎಂದು ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬಿರುಸು ಪಡೆದಿರುವಾಗಲೇ ಹಿರಿಯ ಸಚಿವರಾಗಿರುವ ಈಶ್ವರಪ್ಪ ಈ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಕೆಲವು ಶಾಸಕರು ದೆಹಲಿಗೆ ಹೋಗಿ ಯಡಿಯೂರಪ್ಪ ಅವರನ್ನು ಬದಲಿಸಬೇಕೆಂದು ಬೇಡಿಕೆ ಇಟ್ಟಿರುವುದು ಸತ್ಯ. ಸಂಪೂರ್ಣ ಅಸತ್ಯವೆಂದು ನಾನು ಹೇಳುವುದಿಲ್ಲ. ಕೆಲವು ಶಾಸಕರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಆಗ್ರಹಿಸುತ್ತಾರೆ. ಇನ್ನು ಕೆಲವು ಮಂದಿ ಬದಲಾವಣೆ ಆಗಬೇಕೆಂದು ಹೇಳುತ್ತಿದ್ದಾರೆ. ಈ ಬಗ್ಗೆ ದೆಹಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ವರಿಷ್ಠರು ಏನು ಹೇಳುತ್ತಾರೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ನಾಯಕತ್ವದ ವಿಚಾರದಲ್ಲಿ ಗೊಂದಲ ಇರುವುದು ನಿಜ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ಬಂದು ಮಾತುಕತೆ ನಡೆಸಿದ ಬಳಿಕ ಗೊಂದಲ ಬಗೆಹರಿಯಲಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ವರಿಷ್ಠರು ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಏನು ಬೇಕಾದ್ರೂ ಆಗಬಹುದು ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ಶಾಸಕರು, ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿರೋಧಿ ಬಣದ ಶಾಸಕರು ಯಡಿಯೂರಪ್ಪ ಅವರನ್ನು ಬದಲಿಸಲು ಒತ್ತಡ ಹೇರುತ್ತಿದ್ದರೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಅವರನ್ನೇ ಮುಂದುವರಿಸಲು ಪಟ್ಟು ಹಿಡಿದಿದ್ದಾರೆ. ಈ ರೀತಿಯ ಬೆಳವಣಿಗೆ ಮಧ್ಯದಲ್ಲಿ ಈಶ್ವರಪ್ಪ, ಗೊಂದಲ ಇರುವುದು ನಿಜ. ಅಲ್ಲದೆ ನಾಯಕತ್ವದ ವಿಚಾರದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನುವ ಮೂಲಕ ಬದಲಾವಣೆ ಆಶಯವನ್ನು ಹೊರಹಾಕಿದ್ದಾರೆ.
Senior Karnataka BJP minister K S Eshwarappa on Wednesday admitted that there were calls within the party for Chief Minister B S Yediyurappa’s removal, and said that the high command would take a final decision on this.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm