ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm