ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am