ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm