ಬ್ರೇಕಿಂಗ್ ನ್ಯೂಸ್
17-06-21 12:20 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಬಿಜೆಪಿಯಲ್ಲಿ ನಾಯಕತ್ವ ವಿಚಾರದಲ್ಲಿ ಅಪಸ್ವರ ಎದ್ದಿರುವಾಗಲೇ ಬೆಂಗಳೂರಿಗೆ ಬಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಚರ್ಚೆ ನಡೆದಿಲ್ಲ ಎನ್ನಲಾಗುತ್ತಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ನಾಯಕತ್ವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿಲ್ಲ ಎಂದಿದ್ದಾರೆ.
ಸಿಎಂ ಮತ್ತು ಸಚಿವರುಗಳ ಜೊತೆ ಮಾತುಕತೆ ನಡೆಸಿದ್ದೇನೆ. ಕೋವಿಡ್ ಸಂಬಂಧಿಸಿ ಸೂಚನೆಗಳನ್ನು ನೀಡಿದ್ದೇನೆ. ಸಚಿವರು ಎಲ್ಲ ಜಿಲ್ಲೆಗೆ ತೆರಳಿ ಕಾರ್ಯಕರ್ತರ ಜೊತೆ ಕೆಲಸ ಮಾಡಬೇಕು. ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದ್ದಾಗಿ ತಿಳಿಸಿದರು.


ಪ್ರತಿ ಗುರುವಾರ ಒಂದು ದಿನ ಆಯಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಬೇಕು. ಪ್ರಸ್ತುತ ಕೊರೊನಾದಿಂದ ಮೃತಪಟ್ಟ ಬಡವರ ಕುಟುಂಬಕ್ಕೆ ೧ ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದು ಸಂಬಂಧಪಟ್ಟವರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಬಡವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು.
ಸಭೆಯಲ್ಲಿ ಕೋವಿಡ್, ಪಕ್ಷ ಸಂಘಟನೆ, ಶಾಸಕರ ಸಮಸ್ಯೆ ಆಲಿಸುವ ಬಗ್ಗೆ ಮಾತ್ರ ಚರ್ಚೆ ಆಗಿದೆ. ನಾಯಕತ್ವದ ವಿಚಾರದಲ್ಲಿ ಚರ್ಚೆ ಆಗಿಲ್ಲ. ಪಕ್ಷದ ಶಾಸಕರಾಗಲಿ, ಕಾರ್ಯಕರ್ತರಾಗಲಿ ಪಕ್ಷಕ್ಕೆ ಧಕ್ಕೆ ತರುವ ಹೇಳಿಕೆ ಕೊಡಬಾರದು. ಬಹಿರಂಗ ಹೇಳಿಕೆ ಕೊಡದಂತೆ ಸೂಚಿಸಿದ್ದೇನೆ ಎಂದರು.


ಶಾಸಕರಾದ ಯತ್ನಾಳ್, ಅರವಿಂದ ಬೆಲ್ಲದ ಅವರ ಬಗ್ಗೆ ಚರ್ಚಿಸಿದ್ದೇವೆ. ಯಾರು ಕೂಡ ತಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಬೇಕು. ಇದರ ಬಗ್ಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ. ಯಾರೂ ಬಹಿರಂಗವಾಗಿ ಹೇಳಿಕೆ ಕೊಡಬಾರದು. ಶಾಸಕರು ತಮ್ಮ ಸಮಸ್ಯೆಗಳನ್ನ ಹೇಳಿಕೊಳ್ಳಬಹುದು. ಎಲ್ಲರಿಗೂ ಮುಕ್ತ ಚರ್ಚೆಗೆ ಅವಕಾಶವಿದೆ. ಆದರೆ ಪಕ್ಷಕ್ಕೆ ಧಕ್ಕೆ ಬರುವ ರೀತಿ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ಇನ್ನು ಬಂಡಾಯ ನಾಯಕರೆಂದು ಗುರುತಿಸಿಕೊಂಡ, ಸಚಿವ ಸಿ.ಪಿ.ಯೋಗೀಶ್ವರ್, ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಮಸ್ಯೆ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇಂದು (ಜೂ.17) ಶಾಸಕರ ಜೊತೆ ಅರುಣ್ ಸಿಂಗ್ ಮಾತುಕತೆ ನಡೆಸಲಿದ್ದಾರೆ. ನಾಯಕತ್ವದ ವಿಚಾರದಲ್ಲಿನ ಅಪಸ್ವರದ ಬಗ್ಗೆ ಶಾಸಕರ ಅಭಿಪ್ರಾಯಗಳನ್ನು ಪಡೆದು ಹೈಕಮಾಂಡಿಗೆ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm