ಬ್ರೇಕಿಂಗ್ ನ್ಯೂಸ್
17-06-21 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 17: ಯಾವುದೇ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ದೂರುದಾರರು ಹಾಗೂ ಆರೋಪಿತರಿಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ಹೊಸ ರೀತಿಯ ಆದೇಶ ಮಾಡಿದ್ದು ಈ ಬಗ್ಗೆ ನಾಲ್ಕು ವಾರಗಳಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮಾಧ್ಯಮಗಳು ಅಶ್ಲೀಲ ಮತ್ತು ಹಿಂಸಾತ್ಮಕ ವಿಚಾರಗಳನ್ನು ಪ್ರಕಟಿಸದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಕೀಲೆ ದೀಪಶ್ರೀ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ತನಿಖಾ ಮಾಹಿತಿಗಳನ್ನು ಮಾಧ್ಯಮದವರಿಗೆ ಸೋರಿಕೆ ಮಾಡದಂತೆ ಈ ಹಿಂದೆಯೇ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಿ ಡಿಜಿಪಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹೇಳಿ ಸುತ್ತೋಲೆಯ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕೇವಲ ಸುತ್ತೋಲೆ ಹೊರಡಿಸಿ ಪ್ರಯೋಜನವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ಪ್ರಕರಣದ ಸ್ವರೂಪ, ಸಾಕ್ಷ್ಯಾಧಾರ, ದೂರುದಾರರು ಮತ್ತು ಆರೋಪಿತರ ವಿವರ ಸೇರಿದಂತೆ ಯಾವುದೇ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಬಾರದು ಅಥವಾ ಸೋರಿಕೆ ಮಾಡಬಾರದು. ಮಾಹಿತಿ ನೀಡುವುದರಿಂದ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರುತ್ತದೆ.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಈ ಸಂಬಂಧ ಅಗತ್ಯ ನಿರ್ದೇಶನ ನೀಡಬೇಕು. ಒಂದೊಮ್ಮೆ ಮಾಹಿತಿ ಸೋರಿಕೆ ಮಾಡಿದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಹಲವಾರು ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಮಾಧ್ಯಮಗಳ ಮುಂದೆ, ತನಿಖೆಯ ವಿಚಾರವನ್ನು ಬಹಿರಂಗಪಡಿಸುತ್ತಾರೆ. ಅಲ್ಲದೆ ಪೊಲೀಸರು ಮಾಧ್ಯಮಗಳ ಜೊತೆ ಹೇಗೆ ವ್ಯವಹರಿಸಬೇಕು ಎಂಬ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಬೇಕು ಎಂದು ಆದೇಶ ಮಾಡಿದೆ. ಮುಂದಿನ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.
ಈ ರೀತಿಯ ಆದೇಶ ಹೊರಡಿಸಿದ ಸುದ್ದಿ ಹೊರಬೀಳುತ್ತಲೇ ಮಾಧ್ಯಮ ವಲಯದಲ್ಲಿ ಮತ್ತು ಪೊಲೀಸ್ ವಲಯದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಯಾವುದೇ ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗಿರುವುದನ್ನು ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ನೀಡಬಹುದೇ ಇಲ್ಲವೇ ಎನ್ನುವ ಜಿಜ್ಞಾಸೆಗೆ ಒಳಗಾಗಿದ್ದಾರೆ. ಆದೇಶದ ಪ್ರಕಾರ, ಆರೋಪಿಗಳ ಮಾಹಿತಿಯನ್ನೇ ನೀಡಬಾರದು ಎಂದಿರುವುದು ಮತ್ತು ಸೋರಿಕೆಯಾಗಿ ಮಾಧ್ಯಮಗಳಲ್ಲಿ ಪ್ರಕಟವಾದರೆ ಪೊಲೀಸರಿಗೆ ದಂಡ ವಿಧಿಸಬೇಕು ಎನ್ನುವ ರೀತಿಯ ಆದೇಶ ಇಲಾಖೆಯೊಳಗೇ ಇರಿಸುಮುರಿಸು ಉಂಟುಮಾಡಿದೆ.
The information of the accused in any case should not be given to the media High Court order
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm