ಬ್ರೇಕಿಂಗ್ ನ್ಯೂಸ್
17-06-21 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 17: ಯಾವುದೇ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ದೂರುದಾರರು ಹಾಗೂ ಆರೋಪಿತರಿಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ಹೊಸ ರೀತಿಯ ಆದೇಶ ಮಾಡಿದ್ದು ಈ ಬಗ್ಗೆ ನಾಲ್ಕು ವಾರಗಳಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮಾಧ್ಯಮಗಳು ಅಶ್ಲೀಲ ಮತ್ತು ಹಿಂಸಾತ್ಮಕ ವಿಚಾರಗಳನ್ನು ಪ್ರಕಟಿಸದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಕೀಲೆ ದೀಪಶ್ರೀ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ತನಿಖಾ ಮಾಹಿತಿಗಳನ್ನು ಮಾಧ್ಯಮದವರಿಗೆ ಸೋರಿಕೆ ಮಾಡದಂತೆ ಈ ಹಿಂದೆಯೇ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಿ ಡಿಜಿಪಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹೇಳಿ ಸುತ್ತೋಲೆಯ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕೇವಲ ಸುತ್ತೋಲೆ ಹೊರಡಿಸಿ ಪ್ರಯೋಜನವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ಪ್ರಕರಣದ ಸ್ವರೂಪ, ಸಾಕ್ಷ್ಯಾಧಾರ, ದೂರುದಾರರು ಮತ್ತು ಆರೋಪಿತರ ವಿವರ ಸೇರಿದಂತೆ ಯಾವುದೇ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಬಾರದು ಅಥವಾ ಸೋರಿಕೆ ಮಾಡಬಾರದು. ಮಾಹಿತಿ ನೀಡುವುದರಿಂದ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರುತ್ತದೆ.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಈ ಸಂಬಂಧ ಅಗತ್ಯ ನಿರ್ದೇಶನ ನೀಡಬೇಕು. ಒಂದೊಮ್ಮೆ ಮಾಹಿತಿ ಸೋರಿಕೆ ಮಾಡಿದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಹಲವಾರು ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಮಾಧ್ಯಮಗಳ ಮುಂದೆ, ತನಿಖೆಯ ವಿಚಾರವನ್ನು ಬಹಿರಂಗಪಡಿಸುತ್ತಾರೆ. ಅಲ್ಲದೆ ಪೊಲೀಸರು ಮಾಧ್ಯಮಗಳ ಜೊತೆ ಹೇಗೆ ವ್ಯವಹರಿಸಬೇಕು ಎಂಬ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಬೇಕು ಎಂದು ಆದೇಶ ಮಾಡಿದೆ. ಮುಂದಿನ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.
ಈ ರೀತಿಯ ಆದೇಶ ಹೊರಡಿಸಿದ ಸುದ್ದಿ ಹೊರಬೀಳುತ್ತಲೇ ಮಾಧ್ಯಮ ವಲಯದಲ್ಲಿ ಮತ್ತು ಪೊಲೀಸ್ ವಲಯದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಯಾವುದೇ ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗಿರುವುದನ್ನು ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ನೀಡಬಹುದೇ ಇಲ್ಲವೇ ಎನ್ನುವ ಜಿಜ್ಞಾಸೆಗೆ ಒಳಗಾಗಿದ್ದಾರೆ. ಆದೇಶದ ಪ್ರಕಾರ, ಆರೋಪಿಗಳ ಮಾಹಿತಿಯನ್ನೇ ನೀಡಬಾರದು ಎಂದಿರುವುದು ಮತ್ತು ಸೋರಿಕೆಯಾಗಿ ಮಾಧ್ಯಮಗಳಲ್ಲಿ ಪ್ರಕಟವಾದರೆ ಪೊಲೀಸರಿಗೆ ದಂಡ ವಿಧಿಸಬೇಕು ಎನ್ನುವ ರೀತಿಯ ಆದೇಶ ಇಲಾಖೆಯೊಳಗೇ ಇರಿಸುಮುರಿಸು ಉಂಟುಮಾಡಿದೆ.
The information of the accused in any case should not be given to the media High Court order
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm