ಬ್ರೇಕಿಂಗ್ ನ್ಯೂಸ್
18-06-21 03:24 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 18 : ಬಿ.ಎಸ್ ಯಡಿಯೂರಪ್ಪನವರು ಈ ಹಿಂದೆಯೂ ತಮ್ಮ ಮಕ್ಕಳ ಭ್ರಷ್ಟಾಚಾರದಿಂದಲೇ ಜೈಲಿಗೆ ಹೋಗಿ ಬರುವಂತಾಗಿತ್ತು. ಈ ಸಲ ಕೂಡ ಅವರು ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದೇನೋ ಎಂಬ ಆತಂಕ ನನಗಿದೆ. ಅದಕ್ಕಾಗಿ ಪಕ್ಷದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಸರ್ಕಾರದಲ್ಲಿ ಆಗುತ್ತಿರುವ ಅಕ್ರಮಗಳನ್ನು ವರಿಷ್ಠರ ನಾಯಕರ ಗಮನಕ್ಕೆ ತರಲು ಪ್ರಯತ್ನ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ನಾಯಕ ಹೆಚ್. ವಿಶ್ವನಾಥ್ ಮತ್ತೆ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಕರೆದು ತರಾತುರಿಯಲ್ಲಿ ಅಂಗೀಕಾರ ಮಾಡಿದ್ದಾರೆ, ವಿವಿಧ ಇಲಾಖೆಗಳಲ್ಲಿ, ಸಚಿವರ ಕೆಲಸಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಕಿಕ್ ಬ್ಯಾಕ್ ಸರ್ಕಾರ ಎಂದು ಕಿಡಿಕಾರಿದರು. ಸಚಿವರ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ, ಇದೇನು ಕಾಂಟ್ರಾಕ್ಟ್ ಓರಿಯೆಂಟೆಡ್ ಸರ್ಕಾರನಾ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರದ ವಿರುದ್ಧ ಯಾರೂ ಮಾತನಾಡುತ್ತಿಲ್ಲ. ನೀವೊಬ್ಬರೇ ಹೀಗೆ ಆರೋಪ ಮಾಡುತ್ತಿದ್ದೀರಿ, ಅಧಿಕಾರ ಸಿಗದೆ ಮಾತನಾಡುತ್ತಿದ್ದೀರಿ ಎಂಬ ಮಾತುಗಳು ಕೇಳಿಬರುತ್ತಿದೆಯಲ್ಲವೇ ಎಂದು ಕೇಳಿದಾಗ ವಿಶ್ವನಾಥ್, ಈ ಸರ್ಕಾರ ಅಸ್ತಿತ್ವಕ್ಕೆ ಬರಲು ನಾನು ಕೂಡ ಕಾರಣ, ನನಗೆ ಅಧಿಕಾರ ಸಿಗಬೇಕೆಂಬ ಆಸೆಯಿಲ್ಲ. ಆದರೆ ಕೆಲವರ ಹಣ-ಅಧಿಕಾರ ದಾಹದಿಂದ ಪಕ್ಷ ಹಾಳಾಗಿ ಹೋಗಬಾರದು ಎಂಬುದು ನನ್ನ ಉದ್ದೇಶವಷ್ಟೆ, ಇನ್ನು ಸಿಎಂ ಮತ್ತು ಅವರ ಕುಟುಂಬದವರ ಬಗ್ಗೆ ಮಾತನಾಡಲು ಬಹುತೇಕ ಸಚಿವರು, ಶಾಸಕರಿಗೆ ಧೈರ್ಯವಿಲ್ಲವಷ್ಟೆ. ಇತ್ತೀಚೆಗೆ ಈಶ್ವರಪ್ಪ ಏಕೆ ರಾಜ್ಯಪಾಲರಿಗೆ ದೂರು ಕೊಟ್ಟರು ಎಂದು ಪ್ರಶ್ನಿಸಿದರು. ಇದಲ್ಲದೆ, ಸುದ್ದಿಗೋಷ್ಠಿಯಲ್ಲಿ ಪೂರಕ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದರು.

ಬಿ.ವೈ ವಿಜಯೇಂದ್ರ ವಿರುದ್ಧ ಇಡಿಯಲ್ಲಿ ಪ್ರಕರಣವಿದೆ, ಹಾಗಾಗಿ ಆಗಾಗ ದೆಹಲಿಗೆ ಹೋಗಿ ಬರುತ್ತಿದ್ದಾರೆ. ಬಿಜೆಪಿ ಯಾವುದೇ ಕುಟುಂಬದ ಪಾರ್ಟಿಯಲ್ಲ. ಸರ್ಕಾರ ಯಾರ ಆಸ್ತಿಯೂ ಅಲ್ಲ, ಇದು ಜನರದ್ದು ಎಂದರು.

ರೇಣುಕಾಚಾರ್ಯ, ವಿಶ್ವನಾಥ್, ಹಾಲಪ್ಪ ಬಗ್ಗೆ ವ್ಯಂಗ್ಯ
ಇನ್ನು ತಮ್ಮ ವಿರುದ್ಧ ನಿನ್ನೆ ಹರಿಹಾಯ್ದಿದ್ದ ಎಂ.ಪಿ ರೇಣುಕಾಚಾರ್ಯ ಅವರಿಗೆ ನರ್ಸ್ ಜಯಲಕ್ಷ್ಮಿ ಪ್ರಕರಣದಲ್ಲಿ ಏನಾಯ್ತು ? ಎಸ್.ಆರ್ ವಿಶ್ವನಾಥ್ ಬಚ್ಚಾ, ಇವತ್ತು ನನ್ನಂಥವರ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ಕೋಟಿ ಕೋಟಿ ದೋಚುತ್ತಿದ್ದಾನೆ. ಇನ್ನು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ಆತನ ಪತ್ನಿಯ ಮೇಲೆಯೇ ಅತ್ಯಾಚಾರ ಮಾಡಿದವ, ಸಿದ್ದರಾಮಯ್ಯನವರೇ ನಾನು ನಿಮಗೆ ಅದೆಷ್ಟು ದ್ರಾಕ್ಷಿ ತಿನ್ನಿಸಿದ್ದೇನೆ ಎಂದು ಬಹಿರಂಗವಾಗಿಯೇ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm