ಬ್ರೇಕಿಂಗ್ ನ್ಯೂಸ್
18-06-21 03:24 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 18 : ಬಿ.ಎಸ್ ಯಡಿಯೂರಪ್ಪನವರು ಈ ಹಿಂದೆಯೂ ತಮ್ಮ ಮಕ್ಕಳ ಭ್ರಷ್ಟಾಚಾರದಿಂದಲೇ ಜೈಲಿಗೆ ಹೋಗಿ ಬರುವಂತಾಗಿತ್ತು. ಈ ಸಲ ಕೂಡ ಅವರು ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದೇನೋ ಎಂಬ ಆತಂಕ ನನಗಿದೆ. ಅದಕ್ಕಾಗಿ ಪಕ್ಷದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಸರ್ಕಾರದಲ್ಲಿ ಆಗುತ್ತಿರುವ ಅಕ್ರಮಗಳನ್ನು ವರಿಷ್ಠರ ನಾಯಕರ ಗಮನಕ್ಕೆ ತರಲು ಪ್ರಯತ್ನ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ನಾಯಕ ಹೆಚ್. ವಿಶ್ವನಾಥ್ ಮತ್ತೆ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಕರೆದು ತರಾತುರಿಯಲ್ಲಿ ಅಂಗೀಕಾರ ಮಾಡಿದ್ದಾರೆ, ವಿವಿಧ ಇಲಾಖೆಗಳಲ್ಲಿ, ಸಚಿವರ ಕೆಲಸಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಕಿಕ್ ಬ್ಯಾಕ್ ಸರ್ಕಾರ ಎಂದು ಕಿಡಿಕಾರಿದರು. ಸಚಿವರ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ, ಇದೇನು ಕಾಂಟ್ರಾಕ್ಟ್ ಓರಿಯೆಂಟೆಡ್ ಸರ್ಕಾರನಾ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರದ ವಿರುದ್ಧ ಯಾರೂ ಮಾತನಾಡುತ್ತಿಲ್ಲ. ನೀವೊಬ್ಬರೇ ಹೀಗೆ ಆರೋಪ ಮಾಡುತ್ತಿದ್ದೀರಿ, ಅಧಿಕಾರ ಸಿಗದೆ ಮಾತನಾಡುತ್ತಿದ್ದೀರಿ ಎಂಬ ಮಾತುಗಳು ಕೇಳಿಬರುತ್ತಿದೆಯಲ್ಲವೇ ಎಂದು ಕೇಳಿದಾಗ ವಿಶ್ವನಾಥ್, ಈ ಸರ್ಕಾರ ಅಸ್ತಿತ್ವಕ್ಕೆ ಬರಲು ನಾನು ಕೂಡ ಕಾರಣ, ನನಗೆ ಅಧಿಕಾರ ಸಿಗಬೇಕೆಂಬ ಆಸೆಯಿಲ್ಲ. ಆದರೆ ಕೆಲವರ ಹಣ-ಅಧಿಕಾರ ದಾಹದಿಂದ ಪಕ್ಷ ಹಾಳಾಗಿ ಹೋಗಬಾರದು ಎಂಬುದು ನನ್ನ ಉದ್ದೇಶವಷ್ಟೆ, ಇನ್ನು ಸಿಎಂ ಮತ್ತು ಅವರ ಕುಟುಂಬದವರ ಬಗ್ಗೆ ಮಾತನಾಡಲು ಬಹುತೇಕ ಸಚಿವರು, ಶಾಸಕರಿಗೆ ಧೈರ್ಯವಿಲ್ಲವಷ್ಟೆ. ಇತ್ತೀಚೆಗೆ ಈಶ್ವರಪ್ಪ ಏಕೆ ರಾಜ್ಯಪಾಲರಿಗೆ ದೂರು ಕೊಟ್ಟರು ಎಂದು ಪ್ರಶ್ನಿಸಿದರು. ಇದಲ್ಲದೆ, ಸುದ್ದಿಗೋಷ್ಠಿಯಲ್ಲಿ ಪೂರಕ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದರು.

ಬಿ.ವೈ ವಿಜಯೇಂದ್ರ ವಿರುದ್ಧ ಇಡಿಯಲ್ಲಿ ಪ್ರಕರಣವಿದೆ, ಹಾಗಾಗಿ ಆಗಾಗ ದೆಹಲಿಗೆ ಹೋಗಿ ಬರುತ್ತಿದ್ದಾರೆ. ಬಿಜೆಪಿ ಯಾವುದೇ ಕುಟುಂಬದ ಪಾರ್ಟಿಯಲ್ಲ. ಸರ್ಕಾರ ಯಾರ ಆಸ್ತಿಯೂ ಅಲ್ಲ, ಇದು ಜನರದ್ದು ಎಂದರು.

ರೇಣುಕಾಚಾರ್ಯ, ವಿಶ್ವನಾಥ್, ಹಾಲಪ್ಪ ಬಗ್ಗೆ ವ್ಯಂಗ್ಯ
ಇನ್ನು ತಮ್ಮ ವಿರುದ್ಧ ನಿನ್ನೆ ಹರಿಹಾಯ್ದಿದ್ದ ಎಂ.ಪಿ ರೇಣುಕಾಚಾರ್ಯ ಅವರಿಗೆ ನರ್ಸ್ ಜಯಲಕ್ಷ್ಮಿ ಪ್ರಕರಣದಲ್ಲಿ ಏನಾಯ್ತು ? ಎಸ್.ಆರ್ ವಿಶ್ವನಾಥ್ ಬಚ್ಚಾ, ಇವತ್ತು ನನ್ನಂಥವರ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ಕೋಟಿ ಕೋಟಿ ದೋಚುತ್ತಿದ್ದಾನೆ. ಇನ್ನು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ಆತನ ಪತ್ನಿಯ ಮೇಲೆಯೇ ಅತ್ಯಾಚಾರ ಮಾಡಿದವ, ಸಿದ್ದರಾಮಯ್ಯನವರೇ ನಾನು ನಿಮಗೆ ಅದೆಷ್ಟು ದ್ರಾಕ್ಷಿ ತಿನ್ನಿಸಿದ್ದೇನೆ ಎಂದು ಬಹಿರಂಗವಾಗಿಯೇ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm