ಬ್ರೇಕಿಂಗ್ ನ್ಯೂಸ್
19-06-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 19: ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಬೆಂಚ್ನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.


ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು.
3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷಾ ಸಮಯವನ್ನು ಅಪಹರಾಹ್ನ 10.30ರಿಂದ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.


ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಪಾಸಾಗಲು ಅಗತ್ಯ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.
Karnataka SSLC Exam 2021 Guidelines Released Only One Student for One Bench.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm