ಬ್ರೇಕಿಂಗ್ ನ್ಯೂಸ್
19-06-21 02:27 pm Headline Karnataka News Network ಕರ್ನಾಟಕ
ದಾವಣಗೆರೆ, ಜೂನ್ 19: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.
ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
RDPR minister KS Eshwarappa said the Karnataka government is planning to postpone the taluk and zilla panchayat elections due to the COVID-19 pandemic.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm