ಬ್ರೇಕಿಂಗ್ ನ್ಯೂಸ್
21-06-21 01:11 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 21: ನಾಯಕತ್ವ ಬದಲಾವಣೆಯ ಬಿಕ್ಕಟ್ಟು, ಭಿನ್ನಮತದ ಅಪಸ್ವರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಮಾತುಕತೆ.. ಹೀಗೆ ಭಿನ್ನರಾಗದ ಏಳು ಬೀಳುಗಳ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ಡೌನ್ ಸಡಿಲಿಕೆ, ಕೆಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆ ವಿಚಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅಲ್ಲದೆ, ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.
ಕಳೆದ ವಾರ ಅರುಣ್ ಸಿಂಗ್ ಜೊತೆಗಿನ ಒನ್ ಟು ಒನ್ ಸಭೆಯಲ್ಲಿ ಕೆಲವು ಸಚಿವರು ಮತ್ತು ಶಾಸಕರು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದರು ಎಂಬ ವರದಿಗಳಿದ್ದವು. ಆಬಳಿಕದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು ರಾಜಕೀಯ ಕಾರಣಗಳಿಂದ ಈ ಸಭೆ ಮಹತ್ವದ್ದಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಅಲ್ಲದೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಯೋಗೀಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಯೇ ಎನ್ನುವ ಪ್ರಶ್ನೆಗಳಿದ್ದು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಪೂರ್ಣ ಆಶೀರ್ವಾದ ನೀಡಿದ್ದರೆ, ಯೋಗಿಯನ್ನು ಸಂಪುಟದಿಂದ ತೆಗೆದುಹಾಕುವ ಸಾಧ್ಯತೆಯೂ ಇದೆ.
It was thought that with the visit of state BJP in-charge, Arun Singh, to the city and with his return to Delhi, the jitters created by dissident BJP leaders had been blown away. However, former minister Ramesh Jarkiholi unexpectedly left for Mumbai on Sunday June 20. His action gave rise to some rumours.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm