ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm