ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm