ಬ್ರೇಕಿಂಗ್ ನ್ಯೂಸ್
24-06-21 04:31 pm Headline Karnataka News Network ಕರ್ನಾಟಕ
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಜತೆ ಚರ್ಚಿಸಿದ್ದೇನೆ. ಕೂಡಲೇ ಕ್ರಮಕೈಗೊಳ್ಳುವಂತೆ ಕಮಿಷನರ್ಗೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕದಿರೇಶ್ ಹತ್ಯೆ ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ. ಅವರೇ ರೇಖಾರನ್ನು ಹತ್ಯೆ ಮಾಡಿರುವ ಅನುಮಾನವಿದೆ. ಏನೇ ಆದರೂ ರೇಖಾ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಯಿ ಸಾವಿನ ಸುದ್ದಿಯನ್ನು ಕೇಳಿ ನನಗೆ ಭಯ ಆಯಿತು. ಇಂದು ನಮ್ಮ ಸಂಬಂಧಿ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದರು. ಪೀಟರ್ ಎಂಬುವರು ಅಮ್ಮನ ಕತ್ತಿನ ಭಾಗಕ್ಕೆ ಹೊಡೆದಿದ್ದಾರೆ. ಪೀಟರ್ ನಮ್ಮ ಹತ್ತಿರದ ಸಂಬಂಧಿಯೂ ಆಗಬೇಕು. ನಮ್ಮ ತಂದೆ ಜೊತೆಯೂ ಪೀಟರ್ ಒಡನಾಟ ಹೊಂದಿದ್ದರು. ನಮಗೆ ಗೊತ್ತಿರುವವರೇ ಇದನ್ನು ಮಾಡಿದ್ದಾರೆ. ತಂದೆ ಹತ್ಯೆ ಬಳಿಕ ನನ್ನನ್ನು ಏರಿಯಾದಿಂದ ದೂರ ಇಟ್ಟಿದ್ದರು. ಆದರೆ ಅವರು ಜನರೊಂದಿಗೆ ಅವರು ವಾರ್ಡ್ನಲ್ಲೇ ಉಳಿದಿದ್ದರು ಎಂದು ಮೃತ ರೇಖಾ ಕದಿರೇಶ್ ಅವರ ಕದಿರೇಶ್ ಮಗ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕಿಮ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ರೇಖಾ ಕದಿರೇಶ್ ಅವರ ಮೃತದೇಹವನ್ನು ಇಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸ್ ಪ್ರಕ್ರಿಯೆಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಕೆಲಸ ಮುಂದುವರಿದಿದೆ. ಪ್ರಕ್ರಿಯೆಗಳು ಮುಗಿದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
Read: ಬಿಜೆಪಿಯ ಮಾಜಿ ಬಿಬಿಎಂಪಿ ಮಹಿಳಾ ಕಾರ್ಪೊರೇಟರ್ ಬರ್ಬರ ಕೊಲೆ ! ಹಾಡಹಗಲೇ ರೌಡಿಗಳ ಅಟ್ಟಹಾಸ
Bangalore Former Corporator Rekha Murder CM assures arrest of criminals in 24 hours. Also, her son Rahul has alleged that Peter is the one who had done this crime.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm