ಬ್ರೇಕಿಂಗ್ ನ್ಯೂಸ್
24-06-21 07:35 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 24: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಎಂಎಲ್ಸಿ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ.
ಜಿಲ್ಲಾಡಳಿತ ನನ್ನನ್ನ ನಿರ್ಲಕ್ಷ್ಯ ಮಾಡಿದ್ದಾರೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ಲವಾ.. ಎಂಟು ಬಾರಿ ಶಾಸಕರಾಗಿದ್ದಾರೆ, ನಾನು ಹೇಳಿಕೊಡಬೇಕಾ ಎಂದು ಸಚಿವ ಎಸ್. ಅಂಗಾರ ಅವರನ್ನು ಹೆಸರೆತ್ತದೆ ಪ್ರಶ್ನೆ ಮಾಡಿದ್ದಾರೆ.
ಒಂದೆರಡು ಬಾರಿಯಲ್ಲ ಹಲವು ಬಾರಿ ಕೇಳಿದ್ದೇನೆ. ಅವರು ನಮಗೆ ಬುದ್ಧಿ ಹೇಳಬೇಕಾದವರು. ಸರಕಾರ ಅವರಿಗೆ ಜನರ ದುಡ್ಡಲ್ಲಿ ಎಲ್ಲಾ ಅಧಿಕಾರಿಗಳನ್ನ ನೀಡಿದೆ. ಕೈಗೊಬ್ಬ , ಕಾಲಿಗೊಬ್ಬ ಪಿಎಗಳು ಇದ್ದಾರೆ. ಪಿಎಗಳ ಮೂಲಕ ಶಾಸಕರಿಗೆ ಪ್ರವಾಸದ ಕಾರ್ಯಕ್ರಮಗಳನ್ನು ತಿಳಿಸಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ತಿಂಗಳ ಪ್ರವಾಸದ ಕಾಪಿ ಹಾಕುವುದಿಲ್ಲವೇ, ಕಾರ್ಯಕ್ರಮದ ಕಾಪಿಯನ್ನ ಶಾಸಕರಿಗೆ ಏಕೆ ಕಳಿಸಲ್ಲ ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ. ಆರಂಭದಲ್ಲೇ ಜಿಲ್ಲಾ ಮಂತ್ರಿಗಳಿಗೂ ಹೇಳಿದ್ದೇನೆ. ಪ್ರಾಣೇಶ್ ಇದ್ದರೂ ನಿನ್ನದು ಬರಬೇಕು ಕಣಯ್ಯ ಎಂದಿದ್ದೇನೆ. ಅವರು ಉಪಸಭಾಪತಿ. ಗೌರವವಿದೆ. ಸಂಬಂಧದಲ್ಲಿ ಹೇಳಿದ್ದೇನೆ. ಅಧಿಕಾರಿಗಳ ಸಭೆಗಳಲ್ಲಿ ಭೋಜೇಗೌಡ ಇರುವುದಿಲ್ಲ. ಸಭೆಯಲ್ಲಿ ಶಾಸಕರು, ಸಂಸದರು ಕೂತಾಗ ನಮಗೆ ಬೇರೆಯವರು ಕೇಳುತ್ತಾರೆ. ನಾನೊಬ್ಬ ಜನಪ್ರತಿನಿಧಿಯಾಗಿ ಸಭೆಗೆ ಹೋಗಿಲ್ಲ ಅಂದರೆ ಜನ ಏನೆಂದು ಹೇಳುತ್ತಾರೆ.
ಪ್ರೊಟೋಕಾಲ್ ಏನ್ ಮೇಂಟೇನ್ ಮಾಡಿದ್ದೀರಾ ನೀವು. ನಾನು ಕೇಳಬಾರದಾ. ನಾನು ಶಾಸಕ ಅಲ್ವಾ. 6 ಜಿಲ್ಲೆ 39 ತಾಲೂಕಿನಲ್ಲಿ ನನಗೆ ಪ್ರೋಟೋಕಾಲ್ ಇದೆ. ಇದು ನನ್ನ ನೋಡೆಲ್ ಕ್ಷೇತ್ರ. ನಿಮ್ಮ ಗುಂಪುಗಾರಿಕೆ ಇದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ, ನನಗೆ ಅದು ಗೊತ್ತಿದೆ. ಆ ಶಾಸಕರು, ಈ ಶಾಸಕರನ್ನ ಕರೆಯಬಾರದು ಎಂದು ನಿಮ್ಮ ಗುಂಪುಗಾರಿಕೆಯಿಂದ ನಿಮ್ಮ ಪಕ್ಷದ ಕಚೇರಿಯಲ್ಲಿ ಅಥವಾ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಸಚಿವರು ಬರುವಾಗ ಪ್ರೋಟೋಕಾಲ್ ಮೇನ್ಟೇನ್ ಮಾಡಿ. ಮಾಡಬೇಕು. ನಾನು ಬೇರೆ ಕೇಳಲ್ಲ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ.
ಕಚೇರಿ ಹೊರಗೆ ನೆಲದಲ್ಲಿ ಕುಳಿತಿದ್ದ ಭೋಜೇಗೌಡರನ್ನು ಸಮಾಧಾನಿಸಲು ಸ್ವತಃ ಜಿಲ್ಲಾಧಿಕಾರಿ ಬಂದಿದ್ದರು. ಅವರ ಮುಂದೆಯೇ ಭೋಜೇಗೌಡ, ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಸರಿ ಇದ್ದಾರೆ. ನಿಮ್ಮನ್ನು ಆಡಿಸುವ ಮಂದಿ ಸರಿ ಇಲ್ಲ ಎಂದು ಟೀಕಿಸಿದ್ದಾರೆ.
Posted by Headline Karnataka on Thursday, June 24, 2021
Chikmagalur S. L. Bhojegowda Slams Minister Angara for not calling him to the meeting and breaking the protocol.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm