ಬ್ರೇಕಿಂಗ್ ನ್ಯೂಸ್
25-06-21 04:43 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿಯಿತ್ತ ಜಾರಕಿಹೊಳಿ, ಬಳಿಕ ಹೊರಬಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ಸ್ವಾಮೀಜಿ ಬಳಿಗೆ ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕೀಯವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನೂ ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ಹಾಗೆಂದು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ಅದಕ್ಕಾಗಿ ಮುಂಬೈಗೆ ಹೋಗಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲೇ ನಡೆಯಲಿದೆ. ಆನಂತರ ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
Ramesh Jarkiholi left for Mysuru in his private aircraft from the Sambra airport in Belagavi on Friday. Later, he is expected to head to Bengaluru to meet Chief Minister B.S. Yediyurappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm