ಬ್ರೇಕಿಂಗ್ ನ್ಯೂಸ್
25-06-21 04:43 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿಯಿತ್ತ ಜಾರಕಿಹೊಳಿ, ಬಳಿಕ ಹೊರಬಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ಸ್ವಾಮೀಜಿ ಬಳಿಗೆ ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕೀಯವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನೂ ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ಹಾಗೆಂದು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ಅದಕ್ಕಾಗಿ ಮುಂಬೈಗೆ ಹೋಗಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲೇ ನಡೆಯಲಿದೆ. ಆನಂತರ ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
Ramesh Jarkiholi left for Mysuru in his private aircraft from the Sambra airport in Belagavi on Friday. Later, he is expected to head to Bengaluru to meet Chief Minister B.S. Yediyurappa.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am