ಬ್ರೇಕಿಂಗ್ ನ್ಯೂಸ್
27-06-21 12:42 pm Mangaluru Correspondent ಕರ್ನಾಟಕ
ಹೊನ್ನಾವರ, ಜೂ.26: ಕಾಸರಕೋಡು ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಬಂದರಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶಗೊಂಡು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕಾಸರಕೋಡು ಟೊಂಕಾ ಭಾಗದ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ವಾಣಿಜ್ಯ ಬಂದರು ನಿರ್ಮಿಸುತ್ತಿದೆ. ಸರಕಾರ ವಾಣಿಜ್ಯ ಬಂದರು ನಿರ್ಮಾಣಕ್ಕೆ 93 ಎಕರೆ ಜಾಗವನ್ನು ಮಂಜೂರಿ ಮಾಡಿದೆ. ಕೆಲ ತಿಂಗಳ ಹಿಂದೆ ಕಾಮಗಾರಿ ಪ್ರಾರಂಭಿಸಿದ್ದ ಕಂಪೆನಿ ಸ್ಥಳೀಯರ ವಿರೋಧದಿಂದ ಸ್ಥಗಿತಗೊಳಿಸಿತ್ತು. ಆದರೆ, ಬೆಳ್ಳಂಬೆಳಗ್ಗೆ ಮತ್ತೆ ಸಾವಿರಾರು ಪೊಲೀಸರ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಯಿತು.

ಶನಿವಾರ 500ಕ್ಕೂ ಹೆಚ್ಚು ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಮೂರು ಜೆಸಿಬಿಗಳ ಮೂಲಕ ಕಾರ್ಯಾಚರಣೆಗೆ ಇಳಿದ ಕಂಪೆನಿ, ಮೀನುಗಾರರ ಹತ್ತಾರು ಶೆಡ್ಗಳನ್ನು ಉರುಳಿಸಿದೆ. ಅದಲ್ಲದೆ, ಕಡಲ ತೀರದಂಚಿನ ಮರಗಳು, ತೆಂಗಿನ ಮರಗಳನ್ನು ನಾಶ ಮಾಡಿದೆ ಎಂದು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಆರಂಭಿಸಿದರು.
ಈ ವೇಳೆ ಮೀನುಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆಯಿತು. ಕೆಲ ಯುವಕರು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಮುಂದಾದರು. ತಕ್ಷಣ ಪೊಲೀಸರು, ಕರಾವಳಿ ಕಾವಲು ಪಡೆ ಸಿಬ್ಬಂದಿ ಧಾವಿಸಿ ಯುವಕರನ್ನು ಸಮುದ್ರದಿಂದ ಮೇಲಕ್ಕೆ ಕರೆತಂದಿದ್ದಾರೆ. ಪ್ರತಿಭಟನಾ ನಿರತ ಮೀನುಗಾರರು, ಮಹಿಳೆಯರನ್ನು ಪೊಲೀಸರ ಸಹಾಯದಿಂದ ಚದುರಿಸ ಲಾಯಿತು.
ಯಾವುದೇ ಮುನ್ಸೂಚನೆ ನೀಡದೇ ಬದುಕು ಕಟ್ಟಿಕೊಂಡಿದ್ದ ಶೆಡ್ ಗಳನ್ನು ಉರುಳಿಸುತ್ತಿದ್ದಾರೆ. ಬಡವರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ತಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮೀನುಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಸರಕೋಡು, ಮಲ್ಲುಕುರ್ವಾ ಪ್ರದೇಶದಲ್ಲಿ ಸುಮಾರು 600ಕ್ಕೂ ಹೆಚ್ಚು ಕುಟುಂಬಗಳು ಮೀನುಗಾರಿಕೆಯನ್ನು ನಂಬಿ ಬದುಕುತ್ತಿವೆ. ಸರಕಾರ ಸ್ಥಳೀಯರಿಗೆ ಸ್ಪಷ್ಟ ಮಾಹಿತಿ ನೀಡದೆ ಕಾಮಗಾರಿ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ನೆಪದಲ್ಲಿ ಮೀನುಗಾರರನ್ನು ಸಂಪೂರ್ಣ ಒಕ್ಕಲೆಬ್ಬಿಸುವ ಹುನ್ನಾರ ನಡೆಸಲಾಗಿದೆ. ಆದ್ದರಿಂದ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಈ ಬಗ್ಗೆ ಉಪ ವಿಭಾಗಾಧಿಕಾರಿ ಮಮತಾ ದೇವಿ ಪ್ರತಿಕ್ರಿಯಿಸಿ, ಕಾಮಗಾರಿ ಬಗ್ಗೆ ಈ ಮೊದಲೇ ಸ್ಥಳೀಯ ಮೀನುಗಾರರೊಂದಿಗೆ ಸಭೆ ನಡೆಸಿ ತಿರ್ಮಾನ ಕೈಗೊಳ್ಳಲಾಗಿದೆ. ಜನರು ಮೊದಲಿನಿಂದಲೂ ವಾಸಿಸುತ್ತಿರುವ ಕಾರಣ ಸಹಜವಾಗಿ ಆತಂಕ ಇದೆ. ಆದರೆ, ಈಗಾಗಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇಂದು ಕೇವಲ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮಾತ್ರ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Construction of a Private commercial port in Honnavar, fishermen oppose by protesting the construction of the port, Fishermen attempt to mass suicide to stop the work. Hundreds of police personnel were gathered.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm