ಬ್ರೇಕಿಂಗ್ ನ್ಯೂಸ್
27-06-21 01:49 pm Sandesh, Mysore ಕರ್ನಾಟಕ
ಚಾಮರಾಜನಗರ, ಜೂನ್ 27: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ ವೇಳೆ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಲ್ಲ. ಅದು ಸರ್ಕಾರವೇ ಮಾಡಿದ ಕಗ್ಗೊಲೆಯಾಗಿದೆ. 36 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ಸಂತ್ರಸ್ತರನ್ನು ಕಂಡು ಸಾಂತ್ವನ ಹೇಳಿದ ಡಿಕೆ ಶಿವಕುಮಾರ್, ಆಕ್ಸಿಜನ್ ದುರಂತದಲ್ಲಿ 36 ಜನ ಸಾವು ಪ್ರಕರಣಕ್ಕೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವೇ ನೇರ ಹೊಣೆ. ಈ ಘಟನೆ ಬಗ್ಗೆ ಸರಕಾರ ಎಷ್ಟು ನಿರ್ಲಕ್ಷ್ಯ ವಹಿಸಿದೆ ಅಂದ್ರೆ, ದುರ್ಘಟನೆಗೆ ಕಾರಣರಾದ ಅಧಿಕಾರಿಗಳ ಮೇಲೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ದುರಂತ ಸಂಭವಿಸಿದ್ದರಿಂದ ಸ್ವತಃ ಮುಖ್ಯಮಂತ್ರಿ ಅವರೇ ಭೇಟಿ ನೀಡಬೇಕಿತ್ತು. ಆದರೆ ಅವರಿಗೇ ಭಯ ಆವರಿಸಿದೆ, ಜನರು ಆಕ್ರೋಶಗೊಂಡಿದ್ದಾರೆ, ರೊಚ್ಚಿಗೆದ್ದು ಹೊಡೆಯುತ್ತಾರೆ ಎಂದು ಅವರಿಗೆ ಗುಪ್ತಚರ ಇಲಾಖೆ ಮಾಹಿತಿ ಇತ್ತು. ಹೀಗಾಗಿ ಮುಖ್ಯಮಂತ್ರಿ ಇಲ್ಲಿಗೆ ಭೇಟಿಯನ್ನೇ ನೀಡಿಲ್ಲ ಎಂದರು.

ಅಷ್ಟೇ ಅಲ್ಲ, ದುರಂತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ರಾಜ್ಯ ಸರ್ಕಾರದ ಯಾವುದೇ ಸಚಿವನೂ, ಭೇಟಿ ನೀಡಿಲ್ಲ. ಅವರೆಲ್ಲಾ ಬೆಂಗಳೂರಿನಲ್ಲಿ ತಮಗೆ ಆ ಜವಾಬ್ದಾರಿ ಬೇಕು, ಈ ಜವಾಬ್ದಾರಿ ಬೇಕು ಎಂದು ಕುಳಿತಿದ್ದಾರೆ. ಎಲ್ಲರಿಗೂ ಪಾಲು ಬೇಕು, ಅಷ್ಟೇ. ಜನರ ಸ್ಥಿತಿ ದುರ್ಗತಿಯಾದರೆ ನೋಡಲು ಬರಲ್ಲ. ಕೋವಿಡ್ ಆಸ್ಪತ್ರೆಯಲ್ಲಿ ದುರಂತ ನಡೆದರೆ ಅದರ ಜವಾಬ್ದಾರಿ ವಹಿಸಿಕೊಳ್ಳಲು ಯಾರಿಗೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರಿಗೆ ಸಿಎಂ ಕುರ್ಚಿಯೇ ಇಂಪಾರ್ಟೆಂಟ್ ಆಗಿದೆ, ಆಕ್ಸಿಜನ್ ದುರಂತದಲ್ಲಿ ಮುಖ್ಯಮಂತ್ರಿಗಳ ತಲೆ ದಂಡವೇ ಆಗಬೇಕಿತ್ತು. ಆದರೆ ಜನರ ತಲೆದಂಡ ಆಗಿದೆ ಎಂದು ಹೇಳಿದ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಪ್ರಕರಣ ದಾಖಲಿಸಿಕೊಂಡು ಮೃತ 24 ಕುಟುಂಬಳಿಗೆ ತಾತ್ಕಾಲಿಕವಾಗಿ 2 ಲಕ್ಷ ರೂಪಾಯಿಗಳನ್ನು ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸಿದೆ. ಆದರೆ ಸ್ವತಃ ಸರಕಾರದಿಂದ ಯಾವುದೇ ಸಾಂತ್ವನ, ಪರಿಹಾರ ನೀಡಿಲ್ಲ. ಕೆಪಿಸಿಸಿ ವತಿಯದ ನಾವು 1 ಲಕ್ಷ ರೂಪಾಯಿಗಳನ್ನು ಪ್ರತಿ ಮೃತ ವ್ಯಕ್ತಿಗಳ ಕುಟುಂಬಕ್ಕೂ ನೀಡುತ್ತಿದ್ದೇವೆ ಎಂದರು.

ಆಂಧ್ರಪ್ರದೇಶದ ತಿರುಪತಿ ಬಳಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಲ್ಲಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ 10 ಲಕ್ಷ ರೂಪಾಯಿಗಳ ಪರಿಹಾರ ನೀಡಿದ್ದಾರೆ. ಆದರೆ ಕರ್ನಾಟಕ ಪರಿಹಾರ ನೀಡಲು ಕೋರ್ಟ್ ತಪರಾಕಿ ಬೇಕಾಯಿತು. ಅದೂ ಕೂಡ ಕೇವಲ ಎರಡು ಲಕ್ಷ ರೂಪಾಯಿ ನೀಡಿದ್ದೀರಿ ಎಂದು ದೂರಿದ ಶಿವಕುಮಾರ್, ಕುಟುಂಬಗಳಿಗೆ ಸಾಂತ್ವನ ಹೇಳಲು ಆರೋಗ್ಯ ಸಚಿವ ಬರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನೂ ಬರಲಿಲ್ಲ. ನಾವು ಇವತ್ತಿನವರೆಗೂ ಕಾದು ನೋಡಿದೆವು. ಯಾರೂ ಬರಲಿಲ್ಲ ಎಂದು ನಾವು ಸಾಂತ್ವನ ಹೇಳಿ ಧೈರ್ಯ ತುಂಬಲು ಬಂದಿದ್ದೇವೆ ಎಂದರು.
Oxygen Shortage in Chamarajanagar, KPCC president D. K. Shivakumar slams BJP government as liable for the 24 deaths.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm