ಬ್ರೇಕಿಂಗ್ ನ್ಯೂಸ್
01-07-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ವರಿಷ್ಠರು ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವೆ’ ಎಂದು ತಿಂಗಳ ಹಿಂದಷ್ಟೇ ಹೇಳಿದ್ದ ಯಡಿಯೂರಪ್ಪ, ಈಗ ತದ್ವಿರುದ್ಧ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ. ಇನ್ನೂ ಉತ್ತಮ ಕೆಲಸಗಳನ್ನು ಎರಡು ವರ್ಷಗಳಲ್ಲಿ ಮಾಡಬೇಕಾಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಮತ್ತು ರಾಜ್ಯದ ಜನರಿಗೆ ಭರವಸೆ ನೀಡುತ್ತೇನೆ ಎಂದು ದಿಢೀರ್ ಹೇಳಿಕೆ ನೀಡಿರುವುದು ಜಿಜ್ಞಾಸೆಗೆ ಗ್ರಾಸವಾಗಿದೆ.
ರಾಜಭವನಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲಿಂದ ಹಿಂತಿರುಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.
ನಾಯಕತ್ವ ಬದಲಾವಣೆ ವಿಚಾರದಲ್ಲಿ ‘ಪರೀಕ್ಷೆ ಬರೆದಿದ್ದು, ಫಲಿತಾಂಶವಷ್ಟೇ ಬಾಕಿ’ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿರುವ ಸಚಿವ ಸಿ.ಪಿ. ಯೋಗೇಶ್ವರ್ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯೆಯೇ, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಅವರ ಮಗ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ, ಮುಂದಿನ ಚುನಾವಣೆಯ ನಾಯಕತ್ವವೂ ತಮ್ಮದೇ ಎಂದು ಪರೋಕ್ಷವಾಗಿ ಹೇಳಿರುವುದು ನಾನಾ ರೀತಿಯ ವಿಶ್ಲೇಷಣೆಗೂ ಕಾರಣವಾಗಿದೆ. ಹೀಗೆ ಹೇಳುವ ಮೂಲಕ ‘ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಅವರು ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಗೊಂದಲ ಮುಂದುವರಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುತ್ತಾ ಮುಂದೆ ನಡೆದರು.
Karnataka Chief Minister B S Yediyurappa on Wednesday made an unscheduled visit to Raj Bhavan and met Vajubhai R Vala, after which he said he would work towards bringing the BJP back to power with 130 seats in the next election.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm