ಬ್ರೇಕಿಂಗ್ ನ್ಯೂಸ್
01-07-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ವರಿಷ್ಠರು ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವೆ’ ಎಂದು ತಿಂಗಳ ಹಿಂದಷ್ಟೇ ಹೇಳಿದ್ದ ಯಡಿಯೂರಪ್ಪ, ಈಗ ತದ್ವಿರುದ್ಧ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ. ಇನ್ನೂ ಉತ್ತಮ ಕೆಲಸಗಳನ್ನು ಎರಡು ವರ್ಷಗಳಲ್ಲಿ ಮಾಡಬೇಕಾಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಮತ್ತು ರಾಜ್ಯದ ಜನರಿಗೆ ಭರವಸೆ ನೀಡುತ್ತೇನೆ ಎಂದು ದಿಢೀರ್ ಹೇಳಿಕೆ ನೀಡಿರುವುದು ಜಿಜ್ಞಾಸೆಗೆ ಗ್ರಾಸವಾಗಿದೆ.
ರಾಜಭವನಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲಿಂದ ಹಿಂತಿರುಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ನಾಯಕತ್ವ ಬದಲಾವಣೆ ವಿಚಾರದಲ್ಲಿ ‘ಪರೀಕ್ಷೆ ಬರೆದಿದ್ದು, ಫಲಿತಾಂಶವಷ್ಟೇ ಬಾಕಿ’ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿರುವ ಸಚಿವ ಸಿ.ಪಿ. ಯೋಗೇಶ್ವರ್ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯೆಯೇ, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಅವರ ಮಗ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ, ಮುಂದಿನ ಚುನಾವಣೆಯ ನಾಯಕತ್ವವೂ ತಮ್ಮದೇ ಎಂದು ಪರೋಕ್ಷವಾಗಿ ಹೇಳಿರುವುದು ನಾನಾ ರೀತಿಯ ವಿಶ್ಲೇಷಣೆಗೂ ಕಾರಣವಾಗಿದೆ. ಹೀಗೆ ಹೇಳುವ ಮೂಲಕ ‘ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಅವರು ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಗೊಂದಲ ಮುಂದುವರಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುತ್ತಾ ಮುಂದೆ ನಡೆದರು.
Karnataka Chief Minister B S Yediyurappa on Wednesday made an unscheduled visit to Raj Bhavan and met Vajubhai R Vala, after which he said he would work towards bringing the BJP back to power with 130 seats in the next election.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm