ಬ್ರೇಕಿಂಗ್ ನ್ಯೂಸ್
02-07-21 11:18 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 02; ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಪಿಎ ರಾಜಣ್ಣ ಎಂಬಾತನನ್ನು ಬೆಂಗಳೂರಿನ ಸಿಸಿಬಿ ಪೋಲಿಸರು ವಂಚನೆ ಆರೋಪದ ಮೇಲೆ ಬಂಧಿಸಿದ್ದಾರೆ.
ಸಚಿವರು, ಸಿಎಂ ಕಚೇರಿ ಹೆಸರಿನಲ್ಲಿ ಹಲವರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದ್ದು ಸ್ವತ
ವಿಜಯೇಂದ್ರ ಈ ಕುರಿತು ದೂರು ನೀಡಿದ್ದರು.
ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಗುರುವಾರ ಸಚಿವ ಶ್ರೀರಾಮುಲು ಅವರ ನಿವಾಸದಲ್ಲಿ ರಾಜಣ್ಣನನ್ನು ಬಂಧಿಸಲಾಗಿದೆ. ಪೊಲೀಸರು ಬಂಧಿಸಲು ಹೋದಾಗ ರಾಜಣ್ಣ ಹೈಡ್ರಾಮ ಮಾಡಿರುವ ಪ್ರಸಂಗವೂ ನಡೆದಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕುಟುಂಬದ ಜೊತೆ ಹಲವು ವರ್ಷಗಳಿಂದ ರಾಜಣ್ಣ ನಿಕಟ ಸಂಪರ್ಕ ಹೊಂದಿದ್ದರು. ಹಿಂದೆ ಬಿಜೆಪಿ ಸರ್ಕಾರದಲ್ಲಿ ಶ್ರೀರಾಮುಲು ಸಚಿವರಾಗಿದ್ದಾಗಲೂ ಪಿಎ ಆಗಿದ್ದರು.
ಕೆಲಸದ ಆಮಿಷ, ವರ್ಗಾವಣೆ ಭರವಸೆ ನೀಡಿ ಹಲವರಿಂದ ಹಣವನ್ನು ಪಡೆದು ರಾಜಣ್ಣ ವಂಚನೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಈ ಮೊದಲು ರಾಜಣ್ಣ ಜನಾರ್ದನ ರೆಡ್ಡಿ ಆರಂಭಿಸಿದ್ದ ಎನೋಬಲ್ ಇಂಡಿಯಾದಲ್ಲಿ ಕೆಲಸ ಮಾಡಿದ್ದರು.
ಬಳ್ಳಾರಿಯಲ್ಲಿ ರಾಜಣ್ಣ ಕುಡಿಯುವ ನೀರಿನ ಬಾಟಲ್ ಪ್ಲಾಂಟ್ ಮತ್ತು ಮೊಬೈಲ್ ಶಾಪ್ಗಳನ್ನು ಹೊಂದಿದ್ದಾರೆ. ಹಲವಾರು ವರ್ಷಗಳಿಂದ ಬಿ. ಶ್ರೀರಾಮುಲು ಜೊತೆ ಗುರುತಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆ ಬಳಿಕ ವಂಚನೆ ಆರೋಪದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಲಿದೆ.
35 ವರ್ಷದ ರಾಜು ಅಲಿಯಾಸ್ ರಾಜಣ್ಣ ಬಿ. ವೈ. ವಿಜಯೇಂದ್ರ ತನಗೆ ಆಪ್ತರೆಂದು ಹೇಳಿಕೊಳ್ಳುತ್ತಿದ್ದ. ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ಉದ್ಯಮಿಯೊಬ್ಬರ ಬಳಿ ಕೆಲವೇ ದಿನಗಳ ಹಿಂದೆ ಹಣ ಪಡೆದಿದ್ದರು.
ವರ್ಗಾವಣೆ ಮಾಡಿಸಿಕೊಡುವುದಾಗಿ ಹಲವಾರು ಅಧಿಕಾರಿಗಳ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪ ಸಹ ಇದೆ. ಉದ್ಯಮಿಯೊಬ್ಬರ ಜೊತೆ ರಾಜಣ್ಣ ನಡೆಸಿದ ಮಾತುಕತೆಯ ಆಡಿಯೋ ಕೆಲವು ದಿನಗಳ ಹಿಂದೆ ಲೀಕ್ ಆಗಿತ್ತು.
ವಿಜಯೇಂದ್ರ ಮೂಲಕವೇ ನಿಮಗೆ ಹಣ ಕೊಡಿಸುತ್ತೇನೆ ಎಂದು ಆಡಿಯೋದಲ್ಲಿ ಹೇಳಿದ್ದರು. ಇದನ್ನು ನಂಬಿದ್ದ ಉದ್ಯಮಿ ಹಣವನ್ನು ಸಹ ನೀಡಿದ್ದರು. ಇದು ವಿಜಯೇಂದ್ರ ಗಮನಕ್ಕೆ ಬಂದ ಬಳಿಕ ದೂರನ್ನು ನೀಡಲಾಗಿತ್ತು.
Central Crime Branch sleuths arrested Social Welfare Minister B Sriramulu's PA for misusing the CM's son BY Vijendra name and cheating people worth crores. It is said that Rajanna had taken money from a number of people on the pretext of getting their work done and he allegedly used the names of Minister Sriramulu and CM's son Vijayendra saying that he shares good equations with them.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm