ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm