ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm