ಬ್ರೇಕಿಂಗ್ ನ್ಯೂಸ್
02-07-21 03:41 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 2: ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ ಡಿಓ ಸಂಸ್ಥೆಯ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ನಿವೃತ್ತ ಇಂಜಿನಿಯರ್ ಆಗಿರುವ ಹಾಲ್ದೊಡ್ಡೇರಿ ಸುಧೀಂದ್ರ (61) ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಆಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು. ತೀವ್ರ ಆಘಾತವಾಗಿದ್ದರಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯರು ತಿಳಿಸಿದ್ದರು.
ಆದರೆ, ಒಂದು ವಾರ ಕಾಲ ಅವರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಬ್ರೇನ್ ಡೆಡ್ ಆಗಿದ್ದರಿಂದ ವೈದ್ಯರು ಇಂದು ಮಧ್ಯಾಹ್ನ ಅವರನ್ನು ನಿಧನರಾಗಿರುವರು ಎಂದು ಘೋಷಿಸಿದ್ದಾರೆ. ಸುದೀರ್ಘ ಕಾಲ ವಿಜ್ಞಾನಿಯಾಗಿದ್ದು, ಡಿಆರ್ ಡಿಓದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜೊತೆಗೆ ಮುಂಚೂಣಿಯಲ್ಲಿ ಗುರುತಿಸಲ್ಪಟ್ಟಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ನಿವೃತ್ತಿಯಾಗುವ ಮೊದಲೇ ವಿಜ್ಞಾನದ ಅಂಕಣಗಳಿಂದಲೇ ತುಂಬ ಪ್ರಸಿದ್ಧಿ ಪಡೆದಿದ್ದ ಹಾಲ್ದೊಡ್ಡೇರಿಯವರು ಅಂತರಿಕ್ಷ ವಿಜ್ಞಾನ, ಕ್ಷಿಪಣಿಗಳು, ರಾಕೆಟ್ ಸೈನ್ಸ್, ಜಲ ಮತ್ತು ನೆಲದ ಕೌತುಕಗಳು, ಆಧುನಿಕ ವಿಜ್ಞಾನದ ಕೊಡುಗೆಗಳು ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಧಾಟಿಯಲ್ಲಿ ಬರೆಯುತ್ತಿದ್ದ ಅಂಕಣಗಳು ಕನ್ನಡದ ಲಕ್ಷಾಂತರ ಓದುಗರನ್ನು ತಲುಪಿದ್ದವು.
ಕೊರೊನಾ ಸಂದರ್ಭದಲ್ಲಿ ಹೃದಯಾಘಾತ ಆಗಿದ್ದರೂ, ಅವರ ಆಘಾತಕ್ಕೆ ಕೊರೊನಾ ಕಾರಣವಾಗಿರಲಿಲ್ಲ. ಕೊರೊನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ನಾಡಿನ ಉದ್ದಗಲಕ್ಕೂ ಹಾಲ್ದೊಡ್ಡೇರಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ವಿಜ್ಞಾನಕ್ಕೆ ತನ್ನ ಜ್ಞಾನವನ್ನು ಮುಡಿಪಾಗಿಟ್ಟಿದ್ದ ಸುಧೀಂದ್ರ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಡಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Former scientist DRDO Haldodderi Sudhindra passes away at (61) in Bengaluru.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm