ಬ್ರೇಕಿಂಗ್ ನ್ಯೂಸ್
02-07-21 03:41 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 2: ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ ಡಿಓ ಸಂಸ್ಥೆಯ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ನಿವೃತ್ತ ಇಂಜಿನಿಯರ್ ಆಗಿರುವ ಹಾಲ್ದೊಡ್ಡೇರಿ ಸುಧೀಂದ್ರ (61) ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಆಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು. ತೀವ್ರ ಆಘಾತವಾಗಿದ್ದರಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯರು ತಿಳಿಸಿದ್ದರು.
ಆದರೆ, ಒಂದು ವಾರ ಕಾಲ ಅವರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಬ್ರೇನ್ ಡೆಡ್ ಆಗಿದ್ದರಿಂದ ವೈದ್ಯರು ಇಂದು ಮಧ್ಯಾಹ್ನ ಅವರನ್ನು ನಿಧನರಾಗಿರುವರು ಎಂದು ಘೋಷಿಸಿದ್ದಾರೆ. ಸುದೀರ್ಘ ಕಾಲ ವಿಜ್ಞಾನಿಯಾಗಿದ್ದು, ಡಿಆರ್ ಡಿಓದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜೊತೆಗೆ ಮುಂಚೂಣಿಯಲ್ಲಿ ಗುರುತಿಸಲ್ಪಟ್ಟಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ನಿವೃತ್ತಿಯಾಗುವ ಮೊದಲೇ ವಿಜ್ಞಾನದ ಅಂಕಣಗಳಿಂದಲೇ ತುಂಬ ಪ್ರಸಿದ್ಧಿ ಪಡೆದಿದ್ದ ಹಾಲ್ದೊಡ್ಡೇರಿಯವರು ಅಂತರಿಕ್ಷ ವಿಜ್ಞಾನ, ಕ್ಷಿಪಣಿಗಳು, ರಾಕೆಟ್ ಸೈನ್ಸ್, ಜಲ ಮತ್ತು ನೆಲದ ಕೌತುಕಗಳು, ಆಧುನಿಕ ವಿಜ್ಞಾನದ ಕೊಡುಗೆಗಳು ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಧಾಟಿಯಲ್ಲಿ ಬರೆಯುತ್ತಿದ್ದ ಅಂಕಣಗಳು ಕನ್ನಡದ ಲಕ್ಷಾಂತರ ಓದುಗರನ್ನು ತಲುಪಿದ್ದವು.
ಕೊರೊನಾ ಸಂದರ್ಭದಲ್ಲಿ ಹೃದಯಾಘಾತ ಆಗಿದ್ದರೂ, ಅವರ ಆಘಾತಕ್ಕೆ ಕೊರೊನಾ ಕಾರಣವಾಗಿರಲಿಲ್ಲ. ಕೊರೊನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ನಾಡಿನ ಉದ್ದಗಲಕ್ಕೂ ಹಾಲ್ದೊಡ್ಡೇರಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ವಿಜ್ಞಾನಕ್ಕೆ ತನ್ನ ಜ್ಞಾನವನ್ನು ಮುಡಿಪಾಗಿಟ್ಟಿದ್ದ ಸುಧೀಂದ್ರ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಡಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Former scientist DRDO Haldodderi Sudhindra passes away at (61) in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm