ಬ್ರೇಕಿಂಗ್ ನ್ಯೂಸ್
02-07-21 03:41 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 2: ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ ಡಿಓ ಸಂಸ್ಥೆಯ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ನಿವೃತ್ತ ಇಂಜಿನಿಯರ್ ಆಗಿರುವ ಹಾಲ್ದೊಡ್ಡೇರಿ ಸುಧೀಂದ್ರ (61) ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಆಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು. ತೀವ್ರ ಆಘಾತವಾಗಿದ್ದರಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯರು ತಿಳಿಸಿದ್ದರು.
ಆದರೆ, ಒಂದು ವಾರ ಕಾಲ ಅವರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಬ್ರೇನ್ ಡೆಡ್ ಆಗಿದ್ದರಿಂದ ವೈದ್ಯರು ಇಂದು ಮಧ್ಯಾಹ್ನ ಅವರನ್ನು ನಿಧನರಾಗಿರುವರು ಎಂದು ಘೋಷಿಸಿದ್ದಾರೆ. ಸುದೀರ್ಘ ಕಾಲ ವಿಜ್ಞಾನಿಯಾಗಿದ್ದು, ಡಿಆರ್ ಡಿಓದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜೊತೆಗೆ ಮುಂಚೂಣಿಯಲ್ಲಿ ಗುರುತಿಸಲ್ಪಟ್ಟಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ನಿವೃತ್ತಿಯಾಗುವ ಮೊದಲೇ ವಿಜ್ಞಾನದ ಅಂಕಣಗಳಿಂದಲೇ ತುಂಬ ಪ್ರಸಿದ್ಧಿ ಪಡೆದಿದ್ದ ಹಾಲ್ದೊಡ್ಡೇರಿಯವರು ಅಂತರಿಕ್ಷ ವಿಜ್ಞಾನ, ಕ್ಷಿಪಣಿಗಳು, ರಾಕೆಟ್ ಸೈನ್ಸ್, ಜಲ ಮತ್ತು ನೆಲದ ಕೌತುಕಗಳು, ಆಧುನಿಕ ವಿಜ್ಞಾನದ ಕೊಡುಗೆಗಳು ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಧಾಟಿಯಲ್ಲಿ ಬರೆಯುತ್ತಿದ್ದ ಅಂಕಣಗಳು ಕನ್ನಡದ ಲಕ್ಷಾಂತರ ಓದುಗರನ್ನು ತಲುಪಿದ್ದವು.
ಕೊರೊನಾ ಸಂದರ್ಭದಲ್ಲಿ ಹೃದಯಾಘಾತ ಆಗಿದ್ದರೂ, ಅವರ ಆಘಾತಕ್ಕೆ ಕೊರೊನಾ ಕಾರಣವಾಗಿರಲಿಲ್ಲ. ಕೊರೊನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ನಾಡಿನ ಉದ್ದಗಲಕ್ಕೂ ಹಾಲ್ದೊಡ್ಡೇರಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ವಿಜ್ಞಾನಕ್ಕೆ ತನ್ನ ಜ್ಞಾನವನ್ನು ಮುಡಿಪಾಗಿಟ್ಟಿದ್ದ ಸುಧೀಂದ್ರ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಡಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Former scientist DRDO Haldodderi Sudhindra passes away at (61) in Bengaluru.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm