ಬ್ರೇಕಿಂಗ್ ನ್ಯೂಸ್
01-09-20 06:23 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 1 : ನಮಗೆ ರೈಸ್ ದಾಲ್ ಗೊತ್ತು. ಬಟ್ ಡ್ರಗ್ಸ್ ಬಗ್ಗೆ ಗೊತ್ತಿಲ್ಲ.. ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ಬಗ್ಗೆ ಮಾತಾಡಲ್ಲ.. ಹೀಗೆಂದವರು ಸ್ಯಾಂಡಲ್ವುಡ್ಡಿನ ಖ್ಯಾತ ನಟ ಸುದೀಪ್.
ಸಿದ್ಧಗಂಗಾ ಮಠಕ್ಕೆ ಆಗಮಿಸಿದ್ದ ನಟ ಸುದೀಪ್, ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆಗಿದ್ದಾರೆ. ರೈಸ್ ದಾಲ್ ತಿಂದು ಜೀವನ ಮಾಡಿದ್ದೀನಿ.. ಆದರೆ ಡ್ರಗ್ಸ್ ಬಗ್ಗೆ ನಂಗೆ ಗೊತ್ತೇ ಇಲ್ಲ. ಅದರ ಬಗ್ಗೆ ಚರ್ಚೆನೂ ಮಾಡಲ್ಲ. ಚರ್ಚೆ ಮಾಡೋದೂ ತಪ್ಪಾಗುತ್ತೆ. ಈವಾಗ ನಡೀತಿರೋ ವಿಷ್ಯದ ಬಗ್ಗೆ ಮಾತಾಡೋದೂ ತಪ್ಪು ಆಗತ್ತೆ. ಡ್ರಗ್ಸ್ ಚಿತ್ರರಂಗಕ್ಕೆ ಕಳಂಕ ಅನ್ನೋದು ಕೂಡ ತಪ್ಪು.. ಆದರೆ ಸಮಸ್ಯೆ ಏನಿದ್ದರೂ ಸಾಲ್ವ್ ಆಗುತ್ತೆ. ಹಾಗಂತ ಇಲ್ಲದೇ ಇರೋದನ್ನ ಲಿಂಕ್ ಕೊಟ್ಟು ಮಾತಾಡಬಾರದು ಅಂತ ಸುದೀಪ್ ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಹೇಳಿಕೆ ಕೊಟ್ಟಿದ್ದಾರೆ.

ಚಿರಂಜೀವಿ ಸಾವಿಗೆ ಡ್ರಗ್ಸ್ ಕಾರಣವಾಗಿತ್ತಾ ಎಂಬ ಪ್ರಶ್ನೆಗೆ, ಚಿರಂಜೀವಿ ನನ್ನ ತಮ್ಮನ ಥರ. ಡ್ರಗ್ ನಲ್ಲಿ ಅವನ ಹೆಸರು ಥಳಕು ಹಾಕೋದು ಸರಿ ಕಾಣೋದಿಲ್ಲ ಎಂದಿದ್ದಾರೆ. ಇನ್ನು ನಟ ಚೇತನ್ ಟ್ವೀಟ್ ಕುರಿತ ಪ್ರಶ್ನೆಗೆ ಸುದೀಪ್ ವ್ಯಂಗ್ಯದ ನಗೆ ಬೀರಿದ್ದಾರೆ. ಬಹುಶಃ ಅವರು ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಆಡಿದ್ರು. ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ನಟ ಚೇತನ್ ಟ್ವೀಟ್ ಮಾಡಿ ಕುಟುಕಿದ್ದರು.
ಮಾಧ್ಯಮಗಳು ಕೆಲ ಅನಾವಶ್ಯಕ ವಿಚಾರಗಳನ್ನು ಕೆದಕಿ ಜೀವಂತ ಇಡುತ್ತಿದೆ ಎಂದು ಕಟಕಿಯಾಡಿದ ಸುದೀಪ್, ಇಂದ್ರಜಿತ್ ಗೆ ಬೆದರಿಕೆ ಕರೆಯ ವಿಚಾರದಲ್ಲಿ ಅವರ ಬೆಂಬಲಕ್ಕೆ ನಿಲ್ತೀರಾ ಎಂಬ ಪ್ರಶ್ನೆಗೆ, ಬೇರೆಯದ್ದೇ ಕೋನದಲ್ಲಿ ಮಾತಾಡಿದ್ದಾರೆ. ಇಂದ್ರಜಿತ್ ಅವರ ಇಡೀ ಲೈಫ್ ನಾನಿಲ್ಲದೆ ಸಾಗಿದೆ. ಅವರು ನನಗಾಗಿ ಇಲ್ಲ... ನಾನೂ ಅವರಿಗಾಗಿ ಇಲ್ಲ.. ಬಟ್ ಅದಕ್ಕೆಲ್ಲಾ ಅವರು ಹೆದರಲ್ಲ ಎಂದು ಹೇಳಿದ್ರು.
ಇನ್ನು ಕೊರೋನಾದಿಂದಾಗಿ ಚಿತ್ರರಂಗ ತುಂಬಾ ನಷ್ಟದಲ್ಲಿದೆ. ನಿರ್ಮಾಪಕರು, ಕಾರ್ಮಿಕರು ಎಲ್ಲರೂ ಸಂಕಷ್ಟದಲ್ಲಿ ಇದ್ದಾರೆ. ಇಂಥ ಸಂದರ್ಭದಲ್ಲಿ ಕೊರೊನೋತ್ತರದಲ್ಲಿ ಇಂಡಸ್ಟ್ರಿಯ ಭವಿಷ್ಯದ ಬಗ್ಗೆ ನಾವು ಚಿಂತನೆ ಮಾಡಬೇಕಿದೆ ಎಂದರು ಸುದೀಪ್.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm